ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ “ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು, ಆಮೇಲೆ ಅದನ್ನು ಹರಿದು ಹಾಕೋದು” ಎನ್ನುವಂತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ಹೇಳಿದರು.
ಓಲೈಕೆ ರಾಜಕಾರಣದ ಕರಿ ಛಾಯೆ ಇಲ್ಲೂ ಎದ್ದು ಕಾಣುತ್ತಿದ್ದು ಹಿಂದುಳಿದ, ಶೋಷಿತ ವರ್ಗಗಳ ಕಡೆಗಣನೆ ಮಾಡಲಾಗಿದೆ. ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಬಂಟ್ ನಿಗಮಕ್ಕೆ ಈ ಬಾರಿಯೂ ಬಿಡಿಗಾಸು ನೀಡದೇ ಕರಾವಳಿ ಅಭಿವೃದ್ಧಿಯ ಪಾಲಿನ ನೀರಸ ಬಜೆಟ್ ಮಂಡಿಸಿದ್ದು ದುರದೃಷ್ಟಕರ ಎಂದರು.
ಸಿದ್ದರಾಮಯ್ಯನವರು ಕೇವಲ ತಮ್ಮ ದಾಖಲೆಯ ಸಲುವಾಗಿ ಈ ಬಜೆಟ್ ಮಂಡಿಸಿದ್ದು ಸ್ವತಃ ಅವರಲ್ಲೂ ಉತ್ಸಾಹ ಇರಲಿಲ್ಲ, ಅದೇ ರೀತಿಯಲ್ಲಿ ಆಡಳಿತ ಪಕ್ಷದ ನಾಯಕರಲ್ಲೂ ಯಾವುದೇ ನಿರೀಕ್ಷೆಗಳು ಇರಲಿಲ್ಲ. ಆದರೆ ಜನರ ಮೂಗಿಗೆ ತುಪ್ಪ ಸವರುವ ಕೆಲಸವನ್ನಂತೂ ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದು ಶಾಸಕರು ವ್ಯಂಗ್ಯವಾಡಿದರು.
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…