ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ 15ರವರೆಗೆ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.
ಮಾ.13ರಂದು ರಾತ್ರಿ ಗಂಟೆ 9ಕ್ಕೆ ಸರಿಯಾಗಿ ಪಡ್ರೆ ಶ್ರೀ ಧೂಮಾವತಿ ದೈವಗಳ ಭಂಡಾರ ಮುಕ್ಕ ಭಂಡಾರ ಮನೆಯಿಂದ ಬಂದು ಪಡ್ರೆ ಶ್ರೀ ಧೂಮಾವತಿ ಬಂಟ ದೈವಸ್ಥಾನದಲ್ಲಿ ಧ್ವಜಾರೋಹಣ ಹಾಗೂ ದೀಪಾರಾಧನೆ ಬಲಿ ನಡೆಯಲಿದೆ. ಮಾ.14ರಂದು ಮಧ್ಯಾಹ್ನ ಗಂಟೆ 1ರಿಂದ ಸಂಜೆ 4ರ ತನಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ದಿ.ಶ್ರೀಧರ ಕೆ. ಅಮೀನ್ ಸ್ಮರಣಾರ್ಥ ಶ್ರೀಮತಿ ಆಶಾ ಅಮಿನ್ ಮಂಗಳೂರು ಇವರ ವತಿಯಿಂದ ರಾತ್ರಿ ಗಂಟೆ 7;30ಕ್ಕೆ ಹೂವಿನ ಪೂಜೆ ಮತ್ತು ಕಾಲಾವಧಿ ಜಾತ್ರೆ ನಡೆಯಲಿದೆ. ಮ.15ರಂದು ಸಂಜೆ 4ಗಂಟೆಗೆ ಸರಿಯಾಗಿ ಬಾಕಿಮಾರು ಚೆಂಡು, ರಾತ್ರಿ ದೀಪರಾಧನೆ, ಬಲಿ, ಧ್ವಜಾವರೋಹಣ ಹಾಗು ಭಂಡಾರ ನಿರ್ಗಮನ ನಡೆಯಲಿದೆ. ಈ ದೈವಿಕ ಕಾರ್ಯಕ್ರಮದಲ್ಲಿ ತಾವೆಲ್ಲರೂ ಭಾಗಿಯಾಗುವಂತೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು ವಿನಂತಿಸಿಕೊAಡಿದ್ದಾರೆ. ಇನ್ನು ಈ ಕಾಲಾವಧಿ ಜಾತ್ರೋತ್ಸವದ ದೃಶ್ಯಾವಳಿಗಳು ಅಭಿಮತ ಟಿವಿ ಯೂಟ್ಯುಬ್ನಲ್ಲಿ ನೇರಪ್ರಸಾರಗೊಳ್ಳಲಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…