ಸತತ 30 ವರ್ಷಗಳಿಂದ ವಿಘ್ನನಿವಾರಕನಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದಂದು ಸರಕಾರಿ ಶಾಲೆಯ ಸಭಾಂಗಣದಲ್ಲಿಟ್ಟು ಆರಾಧನೆ ಮಾಡಿಕೊಂಡು ಬರುತ್ತಿರುವ ಶ್ರೀ ಗಣೇಶ ಸೇವಾ ಟ್ರಸ್ಟ್(ರಿ.) ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಳ್ನಾಡು ಸಾಲೆತ್ತೂರು ಇಂದು ಜಾಗವೊಂದನ್ನ ಖರೀದಿಸಿ ಅದರ ಶಿಲಾನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಹೌದು, ಹಿರಿಯರ ಕಾಲದಲ್ಲಿ ಸರಕಾರಿ ಶಾಲೆಯಲ್ಲಿ ಗಣೇಶನನ್ನು ಕೂರಿಸಿ ಅಲ್ಲಿ ಗಣಪನಿಗೆ ಚೌತಿಯಂದು ಆರಾಧನೆ ನಡೆಯುತ್ತಿತ್ತು. ಕಾಲ ಕ್ರಮೇಣ ಅದೇ ವಾಡಿಕೆ ಮುಂದುವರಿದಿದ್ದು, ಇದೀಗ ಸ್ವಂತ ಕಟ್ಟಡವನ್ನು ಸಾಲೆತ್ತೂರು ಸರಕಾರಿ ಶಾಲಾ ಬಳಿ ಸಮಿತಿಯು ದಾನಿಗಳ ಸಹಕಾರದಿಂದ ಖರೀದಿಸಿದೆ. ಮಾ.17ರಂದು ಬೆಳಗ್ಗೆ 9.05ಕ್ಕೆ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಅದೃಷ್ಟ ಚೀಟಿ ಡ್ರಾ ನಡೆಯಲಿದೆ. ಶಿಲಾನ್ಯಾಸವನ್ನು ಹೇರಂಭ ಇಂಡಸ್ಟಿçÃಸ್ ಲಿಮಿಟೆಡ್ ಮುಂಬಯಿ ಇದರ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ನೇರವೇರಿಸಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಪ್ರಭಾಕರ ಭಟ್ ಕಲ್ಲಡ್ಕ ದೀಪಪ್ರಜ್ವಲನೆಗೈಯಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ನೀಲಿ ನಕಾಶೆ ಅನಾವರಣಗೊಳಿಸಿದ್ದು, ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ.) ಸಾಲೆತ್ತೂರು ಇದರ ಅಧ್ಯಕ್ಷರಾದ ಉದಯ್ ಕುಮಾರ್ ರೈ ಅಗರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ ಗಂಟೆ 12ಕ್ಕೆ ಕುಸಾಲ್ದ ಗುರಿಕಾರೆ ದಿನೇಶ್ ಕೋಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹಾಸ್ಯ ಕಲಾವಿದರ ಸಮಾಗಮದೊಂದಿಗೆ ಯಕ್ಷತೆಲಿಕೆ ಯಕ್ಷ ಹಾಸ್ಯ ವೈಭವ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನ 1ಗಂಟೆಗೆ ಅನ್ನದಾನ ನಡೆಯಲಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…