ಜನ ಮನದ ನಾಡಿ ಮಿಡಿತ

Advertisement

ಬಜೆಟ್ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು; ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಬಜೆಟ್ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು; ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಪುತ್ತೂರು : ಪುತ್ತೂರಿಗೆ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರಾಗುವುದರಿಂದ ಅಲ್ಲಿ ಆರೋಗ್ಯ ಸವಲತ್ತುಗಳು ಹೆಚ್ಚಲಿವೆ. ಹಲವು ವರ್ಷಗಳ ಬೇಡಿಕೆಯಾದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬಜೆಟಿನಲ್ಲಿ ಆದ್ಯತೆ ದೊರೆತುದರಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರನ್ನು ಅಭಿಮಾನಿಗಳು, ಕಾರ್ಯಕರ್ತರು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ವೈದ್ಯಕೀಯ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ವೈದ್ಯಕೀಯ ಕಾಲೇಜು ಮತ್ತು ವಾಟರ್ ಮೆಟ್ರೋ ಯೋಜನೆಗಳನ್ನು ಹೊರತುಪಡಿಸಿದರೆ ಕರಾವಳಿಗೆ ಯಾವುದೇ ಆದ್ಯತೆ ಇಲ್ಲದ 2025-26 ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು ಇದನ್ನು ವಿಪಕ್ಷ ಬಿಜೆಪಿ ಹಲಾಲ್ ಬಜೆಟ್ ಎಂದು ಲೇವಡಿ ಮಾಡಿದೆ. ಎಸ್.ಸಿ., ಎಸ್.ಟಿ. ಮತ್ತು ಒ.ಬಿ.ಸಿ ವರ್ಗದವರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗಿದೆ ಮತ್ತು ಅಲ್ಪಸಂಖ್ಯಾತರಿಗೆ ಮಣೆ ಹಾಕಲಾಗಿದೆ. ಇದು ಅತಿಯಾದ ಓಲೈಕೆ ಎಂದು ಬಿಜೆಪಿ ಕೆಂಡ ಕಾರಿದೆ. ಇದು ಸಿದ್ದರಾಮಯ್ಯ ಅವರ ಕೊನೆಯ ಬಜೆಟ್ ಎಂದು ಅದು ಹೇಳಿದೆ. ಸುಮಾರು ಮೂರುವರೆ ಗಂಟೆ ಕಾಲ ಬಜೆಟ್ ಭಾಷಣ ಮಾಡಿದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದು ಹದಿನಾರನೇ ಬಜೆಟ್. ಜೈ ಹಿಂದ್ , ಜೈ ಕರ್ನಾಟಕ ಎನ್ನುವ ಮೂಲಕ ಅವರು ಬಜೆಟ್ ಭಾಷಣ ಮುಕ್ತಾಯಗೊಳಿಸಿದ್ದಾರೆ. . ಬಜೆಟಿನಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಮೊತ್ತ ನೀಡಲಾಗಿದೆ. ಮೆಟ್ರೋ ವಿಸ್ತರಣೆ, ಸುರಂಗ ಮಾರ್ಗ ನಿರ್ಮಾಣ ಮೂಲಕ ಸಂಚಾರ ದಟ್ಟಣೆಯನ್ನು ನಿವಾರಿಸುವ ಕ್ರಮಗಳಿಗೆ ಬಜೆಟ್ ಆದ್ಯತೆ ನೀಡಿದೆ. ಪಂಚಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಇದ್ದ ಅನಿಶ್ಚಿತತೆ ನಿವಾರಣೆಯಾಗಿದೆ. ಅದಕ್ಕೆ ಅನುದಾನವನ್ನು ಬಜೆಟಿನಲ್ಲಿ ತೆಗೆದಿಡುವ ಮೂಲಕ ಮುಖ್ಯಮಂತ್ರಿಗಳು ಗ್ಯಾರಂಟಿಗಳು ಅಬಾಧಿತ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ಬಾರಿಯ ಬಜೆಟಿನ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿ ದಾಟಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!