ಬಜೆಟ್ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು; ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದ ಸಂಭ್ರಮಾಚರಣೆ
ಪುತ್ತೂರು : ಪುತ್ತೂರಿಗೆ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರಾಗುವುದರಿಂದ ಅಲ್ಲಿ ಆರೋಗ್ಯ ಸವಲತ್ತುಗಳು ಹೆಚ್ಚಲಿವೆ. ಹಲವು ವರ್ಷಗಳ ಬೇಡಿಕೆಯಾದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬಜೆಟಿನಲ್ಲಿ ಆದ್ಯತೆ ದೊರೆತುದರಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರನ್ನು ಅಭಿಮಾನಿಗಳು, ಕಾರ್ಯಕರ್ತರು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ವೈದ್ಯಕೀಯ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ವೈದ್ಯಕೀಯ ಕಾಲೇಜು ಮತ್ತು ವಾಟರ್ ಮೆಟ್ರೋ ಯೋಜನೆಗಳನ್ನು ಹೊರತುಪಡಿಸಿದರೆ ಕರಾವಳಿಗೆ ಯಾವುದೇ ಆದ್ಯತೆ ಇಲ್ಲದ 2025-26 ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು ಇದನ್ನು ವಿಪಕ್ಷ ಬಿಜೆಪಿ ಹಲಾಲ್ ಬಜೆಟ್ ಎಂದು ಲೇವಡಿ ಮಾಡಿದೆ. ಎಸ್.ಸಿ., ಎಸ್.ಟಿ. ಮತ್ತು ಒ.ಬಿ.ಸಿ ವರ್ಗದವರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗಿದೆ ಮತ್ತು ಅಲ್ಪಸಂಖ್ಯಾತರಿಗೆ ಮಣೆ ಹಾಕಲಾಗಿದೆ. ಇದು ಅತಿಯಾದ ಓಲೈಕೆ ಎಂದು ಬಿಜೆಪಿ ಕೆಂಡ ಕಾರಿದೆ. ಇದು ಸಿದ್ದರಾಮಯ್ಯ ಅವರ ಕೊನೆಯ ಬಜೆಟ್ ಎಂದು ಅದು ಹೇಳಿದೆ. ಸುಮಾರು ಮೂರುವರೆ ಗಂಟೆ ಕಾಲ ಬಜೆಟ್ ಭಾಷಣ ಮಾಡಿದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದು ಹದಿನಾರನೇ ಬಜೆಟ್. ಜೈ ಹಿಂದ್ , ಜೈ ಕರ್ನಾಟಕ ಎನ್ನುವ ಮೂಲಕ ಅವರು ಬಜೆಟ್ ಭಾಷಣ ಮುಕ್ತಾಯಗೊಳಿಸಿದ್ದಾರೆ. . ಬಜೆಟಿನಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಮೊತ್ತ ನೀಡಲಾಗಿದೆ. ಮೆಟ್ರೋ ವಿಸ್ತರಣೆ, ಸುರಂಗ ಮಾರ್ಗ ನಿರ್ಮಾಣ ಮೂಲಕ ಸಂಚಾರ ದಟ್ಟಣೆಯನ್ನು ನಿವಾರಿಸುವ ಕ್ರಮಗಳಿಗೆ ಬಜೆಟ್ ಆದ್ಯತೆ ನೀಡಿದೆ. ಪಂಚಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಇದ್ದ ಅನಿಶ್ಚಿತತೆ ನಿವಾರಣೆಯಾಗಿದೆ. ಅದಕ್ಕೆ ಅನುದಾನವನ್ನು ಬಜೆಟಿನಲ್ಲಿ ತೆಗೆದಿಡುವ ಮೂಲಕ ಮುಖ್ಯಮಂತ್ರಿಗಳು ಗ್ಯಾರಂಟಿಗಳು ಅಬಾಧಿತ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ಬಾರಿಯ ಬಜೆಟಿನ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿ ದಾಟಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…