ಬಜೆಟ್ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು; ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದ ಸಂಭ್ರಮಾಚರಣೆ
ಪುತ್ತೂರು : ಪುತ್ತೂರಿಗೆ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರಾಗುವುದರಿಂದ ಅಲ್ಲಿ ಆರೋಗ್ಯ ಸವಲತ್ತುಗಳು ಹೆಚ್ಚಲಿವೆ. ಹಲವು ವರ್ಷಗಳ ಬೇಡಿಕೆಯಾದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬಜೆಟಿನಲ್ಲಿ ಆದ್ಯತೆ ದೊರೆತುದರಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರನ್ನು ಅಭಿಮಾನಿಗಳು, ಕಾರ್ಯಕರ್ತರು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ವೈದ್ಯಕೀಯ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ವೈದ್ಯಕೀಯ ಕಾಲೇಜು ಮತ್ತು ವಾಟರ್ ಮೆಟ್ರೋ ಯೋಜನೆಗಳನ್ನು ಹೊರತುಪಡಿಸಿದರೆ ಕರಾವಳಿಗೆ ಯಾವುದೇ ಆದ್ಯತೆ ಇಲ್ಲದ 2025-26 ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು ಇದನ್ನು ವಿಪಕ್ಷ ಬಿಜೆಪಿ ಹಲಾಲ್ ಬಜೆಟ್ ಎಂದು ಲೇವಡಿ ಮಾಡಿದೆ. ಎಸ್.ಸಿ., ಎಸ್.ಟಿ. ಮತ್ತು ಒ.ಬಿ.ಸಿ ವರ್ಗದವರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗಿದೆ ಮತ್ತು ಅಲ್ಪಸಂಖ್ಯಾತರಿಗೆ ಮಣೆ ಹಾಕಲಾಗಿದೆ. ಇದು ಅತಿಯಾದ ಓಲೈಕೆ ಎಂದು ಬಿಜೆಪಿ ಕೆಂಡ ಕಾರಿದೆ. ಇದು ಸಿದ್ದರಾಮಯ್ಯ ಅವರ ಕೊನೆಯ ಬಜೆಟ್ ಎಂದು ಅದು ಹೇಳಿದೆ. ಸುಮಾರು ಮೂರುವರೆ ಗಂಟೆ ಕಾಲ ಬಜೆಟ್ ಭಾಷಣ ಮಾಡಿದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದು ಹದಿನಾರನೇ ಬಜೆಟ್. ಜೈ ಹಿಂದ್ , ಜೈ ಕರ್ನಾಟಕ ಎನ್ನುವ ಮೂಲಕ ಅವರು ಬಜೆಟ್ ಭಾಷಣ ಮುಕ್ತಾಯಗೊಳಿಸಿದ್ದಾರೆ. . ಬಜೆಟಿನಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಮೊತ್ತ ನೀಡಲಾಗಿದೆ. ಮೆಟ್ರೋ ವಿಸ್ತರಣೆ, ಸುರಂಗ ಮಾರ್ಗ ನಿರ್ಮಾಣ ಮೂಲಕ ಸಂಚಾರ ದಟ್ಟಣೆಯನ್ನು ನಿವಾರಿಸುವ ಕ್ರಮಗಳಿಗೆ ಬಜೆಟ್ ಆದ್ಯತೆ ನೀಡಿದೆ. ಪಂಚಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಇದ್ದ ಅನಿಶ್ಚಿತತೆ ನಿವಾರಣೆಯಾಗಿದೆ. ಅದಕ್ಕೆ ಅನುದಾನವನ್ನು ಬಜೆಟಿನಲ್ಲಿ ತೆಗೆದಿಡುವ ಮೂಲಕ ಮುಖ್ಯಮಂತ್ರಿಗಳು ಗ್ಯಾರಂಟಿಗಳು ಅಬಾಧಿತ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ಬಾರಿಯ ಬಜೆಟಿನ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿ ದಾಟಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…