ಜನ ಮನದ ನಾಡಿ ಮಿಡಿತ

Advertisement

ಪಂಜ ಕೊಯಿಕುಡೆ ಶ್ರೀ ಶನಿಶ್ಚರ ಮಂಡಳಿಯ ವಾರ್ಷಿಕ ಶನಿ ಪೂಜೆ, ಸಾಧಕರಿಗೆ ಸನ್ಮಾನ

ಮೂಲ್ಕಿ: ಪಂಜ ಕೊಯಿಕುಡೆ ಶ್ರೀ ಶನೈಶ್ಚರ ಮಂಡಳಿಯ ವಾರ್ಷಿಕ ಶನಿ ಪೂಜಾ ಮಹೋತ್ಸವವು ಮಾ.8ರ ಶನಿವಾರ ನಡೆಯಿತು.

 


ಪಂಜ ವಾಸುದೇವ ಭಟ್ ನೇತೃತ್ವದಲ್ಲಿ ಪೂಜಾ ವಿಧಿವಿಧಾನ ನೆರವೇರಿತು.ಶ್ರೇಷ್ಠ ಕಲಾವಿದರಾದ ಅಶೋಕ್ ಶೆಟ್ಟಿ ಸರಪಾಡಿ, ಕದ್ರಿ ನವನೀತ್ ಶೆಟ್ಟಿ, ಸೀತಾರಾಮ್ ಕುಮಾರ್ ಕಟೀಲ್, ಡಾ.ಪ್ರಖ್ಯಾತ್ ಶೆಟ್ಟಿ, ವಸಂತ ದೇವಾಡಿಗ ಇವರೆಲ್ಲರೂ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಶನೇಶ್ವರನ ಕತೆಯನ್ನು ಪ್ರದರ್ಶಿಸಿದ್ದಾರೆ.

 

ಶ್ರೀ ಜಾರಂದಾಯ ಮಹಿಳಾ ಮಂಡಳಿ ನವಜ್ಯೋತಿ ಮಹಿಳಾ ಮಂಡಳಿ ಪಂಜ ಹಾಗೂ ಪಂಜ ವಿಠೋಬಾ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ನಡೆಯಿತು.ಮಧ್ಯಾಹ್ನ ಜಿಲ್ಲಾ ಪ್ರಶಸ್ತಿ ವಿಜೇತ ಪದ್ಮನಾಭ ಶೆಟ್ಟಿ, ಕ್ರೀಡಾ ಪಟುಗಳಾದ ಪವಿತ್ರಾ, ಪ್ರತೀಕ್ಷಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಅದೇ ರೀತಿ ಪ್ರಾಥಮಿಕ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.ಮಂಡಳಿಯ ಗೌರವಾಧ್ಯಕ್ಷ ವಾಸುದೇವ್ ಭಟ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ನಲ್ಯಗುತ್ತು ವಸಂತ ಶೆಟ್ಟಿ, ಬರ್ಕೆ ರಘುರಾಮ ಶೆಟ್ಟಿಮಂಡಳಿ ಅಧ್ಯಕ್ಷ ನವೀನ್ ಶೆಟ್ಟಿ ಪಾದೆಮನೆ,ಬಾಲಕೃಷ್ಣ ಮೊಯ್ಲಿ, ಸತೀಶ್ ಶೆಟ್ಟಿ ಪಂಜದಗುತ್ತುಸತೀಶ್ ಶೆಟ್ಟಿ ಬೈಲಗುತ್ತು,ಕೆಮ್ರಾಲ್ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಪಂಜ ಎಲ್ಲರೂ ಉಪಸ್ಥಿತರಿದ್ದರು. ಪಂಜ ವಾಸುದೇವ ಭಟ್ ಪ್ರಾರ್ಥಿಸಿದರು.ನಿತೇಶ್ ದೇವಾಡಿಗ ಸನ್ಮಾನ ಪತ್ರ ವಾಚಿಸಿದರು.ಭಾಸ್ಕರ ಶೆಟ್ಟಿ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!