ಮೂಲ್ಕಿ: ಪಂಜ ಕೊಯಿಕುಡೆ ಶ್ರೀ ಶನೈಶ್ಚರ ಮಂಡಳಿಯ ವಾರ್ಷಿಕ ಶನಿ ಪೂಜಾ ಮಹೋತ್ಸವವು ಮಾ.8ರ ಶನಿವಾರ ನಡೆಯಿತು.
ಪಂಜ ವಾಸುದೇವ ಭಟ್ ನೇತೃತ್ವದಲ್ಲಿ ಪೂಜಾ ವಿಧಿವಿಧಾನ ನೆರವೇರಿತು.ಶ್ರೇಷ್ಠ ಕಲಾವಿದರಾದ ಅಶೋಕ್ ಶೆಟ್ಟಿ ಸರಪಾಡಿ, ಕದ್ರಿ ನವನೀತ್ ಶೆಟ್ಟಿ, ಸೀತಾರಾಮ್ ಕುಮಾರ್ ಕಟೀಲ್, ಡಾ.ಪ್ರಖ್ಯಾತ್ ಶೆಟ್ಟಿ, ವಸಂತ ದೇವಾಡಿಗ ಇವರೆಲ್ಲರೂ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಶನೇಶ್ವರನ ಕತೆಯನ್ನು ಪ್ರದರ್ಶಿಸಿದ್ದಾರೆ.
ಶ್ರೀ ಜಾರಂದಾಯ ಮಹಿಳಾ ಮಂಡಳಿ ನವಜ್ಯೋತಿ ಮಹಿಳಾ ಮಂಡಳಿ ಪಂಜ ಹಾಗೂ ಪಂಜ ವಿಠೋಬಾ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ನಡೆಯಿತು.ಮಧ್ಯಾಹ್ನ ಜಿಲ್ಲಾ ಪ್ರಶಸ್ತಿ ವಿಜೇತ ಪದ್ಮನಾಭ ಶೆಟ್ಟಿ, ಕ್ರೀಡಾ ಪಟುಗಳಾದ ಪವಿತ್ರಾ, ಪ್ರತೀಕ್ಷಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಅದೇ ರೀತಿ ಪ್ರಾಥಮಿಕ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.ಮಂಡಳಿಯ ಗೌರವಾಧ್ಯಕ್ಷ ವಾಸುದೇವ್ ಭಟ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ನಲ್ಯಗುತ್ತು ವಸಂತ ಶೆಟ್ಟಿ, ಬರ್ಕೆ ರಘುರಾಮ ಶೆಟ್ಟಿಮಂಡಳಿ ಅಧ್ಯಕ್ಷ ನವೀನ್ ಶೆಟ್ಟಿ ಪಾದೆಮನೆ,ಬಾಲಕೃಷ್ಣ ಮೊಯ್ಲಿ, ಸತೀಶ್ ಶೆಟ್ಟಿ ಪಂಜದಗುತ್ತುಸತೀಶ್ ಶೆಟ್ಟಿ ಬೈಲಗುತ್ತು,ಕೆಮ್ರಾಲ್ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಪಂಜ ಎಲ್ಲರೂ ಉಪಸ್ಥಿತರಿದ್ದರು. ಪಂಜ ವಾಸುದೇವ ಭಟ್ ಪ್ರಾರ್ಥಿಸಿದರು.ನಿತೇಶ್ ದೇವಾಡಿಗ ಸನ್ಮಾನ ಪತ್ರ ವಾಚಿಸಿದರು.ಭಾಸ್ಕರ ಶೆಟ್ಟಿ ನಿರೂಪಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…