ಜನ ಮನದ ನಾಡಿ ಮಿಡಿತ

Advertisement

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.೧೬ರಂದು ನಡೆಯಲಿರುವ ೧೭ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಪಿಲಾತಬೆಟ್ಟು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ರವಿವಾರ ನಡೆಯಿತು.

ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ನಾಗೇಶ್ ಪ್ರಭು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದುಂದು ವೆಚ್ಚದ ವಿವಾಹಗಳ ಬದಲಾಗಿ ಸಾಮೂಹಿಕ ವಿವಾಹ ಉತ್ತಮ ಕಾರ್ಯವಾಗಿದೆ ಎಂದು ಹೇಳಿದರು.


ಬಂಟ್ವಾಳ ಉಪ ತಹಶೀಲ್ದಾರ್ ನವೀನ್ ಬೆಂಜನಪದವು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ವಿವಾಹ ವಿಚ್ಛೇದನಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಪತಿ, ಪತ್ನಿ ಪರಸ್ಪರ ಅರ್ಥೈಸಿಕೊಂಡಾಗ ನೆಮ್ಮದಿಯ ಜೀವನ ಸಾಧ್ಯ ಎಂದರು.
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ಬಡ, ಹಿಂದುಳಿದ ವರ್ಗದ ಜನತೆ ಅದ್ಧೂರಿಯ ವಿವಾಹ ನಡೆಸಲು ಅಸಾಧ್ಯವಾದ ಕಾರಣ ಸಾಮೂಹಿಕ ವಿವಾಹದ ಮೂಲಕ ವಿಜೃಂಭಣೆಯಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಗುತ್ತಿಗೆದಾರ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ , ಕುತ್ತಿಲ ಬ್ರಹ್ಮ ಬದರ್ಕಳ ಗರಡಿ ಆಡಳಿತ ಸಮಿತಿ ಅಧ್ಯಕ್ಷ ಶುಶಾಂತ್ ಕರ್ಕೇರಾ, ಕೊರಂಟಬೆಟ್ಟು ಶ್ರೀ ಬ್ರಹ್ಮ ಬದರ್ಕಳ ಗರಡಿಯ ಅಧ್ಯಕ್ಷ ಸದಾನಂದ ಪೂಜಾರಿ ಅವರು ಮಂಗಳ ವಸ್ತ್ರ ವಿತರಿಸಿದರು. ಮೂರ್ಜೆ ನಾರಾಯಣ ಗುರು ವಸತಿ ಶಾಲೆ ಪ್ರಾಂಶುಪಾಲ ಸಂತೋಷ್ ಸನಿಲ್, ಪಿಲಾತಬೆಟ್ಟು ಗ್ರಾ.ಪಂ.ಅಭಿವೃದ್ಧಿ ಅಽಕಾರಿ ಯಮುನಪ್ಪ ಕೊರವರ, ಗ್ರಾ.ಪಂ. ಸದಸ್ಯ ಕಾಂತಪ್ಪ ಕರ್ಕೇರ,ಕಬಡ್ಡಿ ತೀರ್ಪುಗಾರರ ಸಮಿತಿ ಸಂಚಾಲಕ ಫ್ರಾನ್ಸಿಸ್ ವಿ.ವಿ.,ಉದ್ಯಮಿ ನಿತಿನ್ ಶೆಟ್ಟಿ ಮೂರ್ಜೆ, ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಮಾಜಿ ಅಧ್ಯಕ್ಷರಾದ ಮಾಧವ ಬಂಗೇರ, ಪಿಲಾತಬೆಟ್ಟು ಪ್ರಾ.ಕೃ.ಸ.ಸಂಘದ ಉಪಾಧ್ಯಕ್ಷ ರವಿಶಂಕರ ಹೊಳ್ಳ, ಗ್ರಂಥಪಾಲಕಿ ಅಮೃತಾ ಎಸ್., ಹರೀಶ್ ನಾಕ್, ರಫೀಕ್ ಆರ್‌ಡಿಎಸ್, ಹೇಮಂತ, ಧನ್ಯರಾಜ್ ಮತ್ತಿತರರು ಉಪಸ್ಥಿತರಿದ್ದರು.
ಗಿರೀಶ್ ಸಾಲ್ಯಾನ್ ಹೆಗ್ಡೆಬೆಟ್ಟುಗುತ್ತು ಮತ್ತು ಹರೀಶ್ ಪೂಜಾರಿ ಅವರು ಗುರಿಕಾರರಾಗಿ ಭಾಗವಹಿಸಿ ನಿಶ್ಚಯ ತಾಂಬೂಲ ನೆರವೇರಿಸಿದರು. ಗುರಿಕಾರರು ತುಳುನಾಡಿನ ಸಂಪ್ರದಾಯ ಪ್ರಕಾರ ವೀಳ್ಯೆದೆಲೆ , ಅಡಿಕೆ, ಮಲ್ಲಿಗೆ ಹೂವು ಇರಿಸಿದ ಹರಿವಾಣವನ್ನು ಪರಸ್ಪರ ಬದಲಾಯಿಸಿಕೊಂಡರು. ೮ ಜೋಡಿ ವಧು, ವರರಿಗೆ ಮಂಗಳ ವಸ್ತ್ರ ವಿತರಿಸಲಾಯಿತು. ವಧು-ವರರ ಕುಟುಂಬಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ಬಿ.ಸಿ.ರೋಡ್ ಅಮರ್ ಪ್ರಿಂಟರ‍್ಸ್ ಮುದ್ರಣ ಸಂಸ್ಥೆಯ ಸಿಬಂದಿಗಳಿಗೆ ಗೌರವಾರ್ಪಣೆ ನಡೆಸಲಾಯಿತು.
ಕ್ಲಬ್ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿ,ವಂದಿಸಿದರು.ರಂಗ ಎಚ್ಕೆ ನಯನಾಡು ಅವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!