ಕರಾವಳಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.೧೬ರಂದು ನಡೆಯಲಿರುವ ೧೭ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಪಿಲಾತಬೆಟ್ಟು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ರವಿವಾರ ನಡೆಯಿತು.

ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ನಾಗೇಶ್ ಪ್ರಭು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದುಂದು ವೆಚ್ಚದ ವಿವಾಹಗಳ ಬದಲಾಗಿ ಸಾಮೂಹಿಕ ವಿವಾಹ ಉತ್ತಮ ಕಾರ್ಯವಾಗಿದೆ ಎಂದು ಹೇಳಿದರು.


ಬಂಟ್ವಾಳ ಉಪ ತಹಶೀಲ್ದಾರ್ ನವೀನ್ ಬೆಂಜನಪದವು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ವಿವಾಹ ವಿಚ್ಛೇದನಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಪತಿ, ಪತ್ನಿ ಪರಸ್ಪರ ಅರ್ಥೈಸಿಕೊಂಡಾಗ ನೆಮ್ಮದಿಯ ಜೀವನ ಸಾಧ್ಯ ಎಂದರು.
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ಬಡ, ಹಿಂದುಳಿದ ವರ್ಗದ ಜನತೆ ಅದ್ಧೂರಿಯ ವಿವಾಹ ನಡೆಸಲು ಅಸಾಧ್ಯವಾದ ಕಾರಣ ಸಾಮೂಹಿಕ ವಿವಾಹದ ಮೂಲಕ ವಿಜೃಂಭಣೆಯಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಗುತ್ತಿಗೆದಾರ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ , ಕುತ್ತಿಲ ಬ್ರಹ್ಮ ಬದರ್ಕಳ ಗರಡಿ ಆಡಳಿತ ಸಮಿತಿ ಅಧ್ಯಕ್ಷ ಶುಶಾಂತ್ ಕರ್ಕೇರಾ, ಕೊರಂಟಬೆಟ್ಟು ಶ್ರೀ ಬ್ರಹ್ಮ ಬದರ್ಕಳ ಗರಡಿಯ ಅಧ್ಯಕ್ಷ ಸದಾನಂದ ಪೂಜಾರಿ ಅವರು ಮಂಗಳ ವಸ್ತ್ರ ವಿತರಿಸಿದರು. ಮೂರ್ಜೆ ನಾರಾಯಣ ಗುರು ವಸತಿ ಶಾಲೆ ಪ್ರಾಂಶುಪಾಲ ಸಂತೋಷ್ ಸನಿಲ್, ಪಿಲಾತಬೆಟ್ಟು ಗ್ರಾ.ಪಂ.ಅಭಿವೃದ್ಧಿ ಅಽಕಾರಿ ಯಮುನಪ್ಪ ಕೊರವರ, ಗ್ರಾ.ಪಂ. ಸದಸ್ಯ ಕಾಂತಪ್ಪ ಕರ್ಕೇರ,ಕಬಡ್ಡಿ ತೀರ್ಪುಗಾರರ ಸಮಿತಿ ಸಂಚಾಲಕ ಫ್ರಾನ್ಸಿಸ್ ವಿ.ವಿ.,ಉದ್ಯಮಿ ನಿತಿನ್ ಶೆಟ್ಟಿ ಮೂರ್ಜೆ, ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಮಾಜಿ ಅಧ್ಯಕ್ಷರಾದ ಮಾಧವ ಬಂಗೇರ, ಪಿಲಾತಬೆಟ್ಟು ಪ್ರಾ.ಕೃ.ಸ.ಸಂಘದ ಉಪಾಧ್ಯಕ್ಷ ರವಿಶಂಕರ ಹೊಳ್ಳ, ಗ್ರಂಥಪಾಲಕಿ ಅಮೃತಾ ಎಸ್., ಹರೀಶ್ ನಾಕ್, ರಫೀಕ್ ಆರ್‌ಡಿಎಸ್, ಹೇಮಂತ, ಧನ್ಯರಾಜ್ ಮತ್ತಿತರರು ಉಪಸ್ಥಿತರಿದ್ದರು.
ಗಿರೀಶ್ ಸಾಲ್ಯಾನ್ ಹೆಗ್ಡೆಬೆಟ್ಟುಗುತ್ತು ಮತ್ತು ಹರೀಶ್ ಪೂಜಾರಿ ಅವರು ಗುರಿಕಾರರಾಗಿ ಭಾಗವಹಿಸಿ ನಿಶ್ಚಯ ತಾಂಬೂಲ ನೆರವೇರಿಸಿದರು. ಗುರಿಕಾರರು ತುಳುನಾಡಿನ ಸಂಪ್ರದಾಯ ಪ್ರಕಾರ ವೀಳ್ಯೆದೆಲೆ , ಅಡಿಕೆ, ಮಲ್ಲಿಗೆ ಹೂವು ಇರಿಸಿದ ಹರಿವಾಣವನ್ನು ಪರಸ್ಪರ ಬದಲಾಯಿಸಿಕೊಂಡರು. ೮ ಜೋಡಿ ವಧು, ವರರಿಗೆ ಮಂಗಳ ವಸ್ತ್ರ ವಿತರಿಸಲಾಯಿತು. ವಧು-ವರರ ಕುಟುಂಬಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ಬಿ.ಸಿ.ರೋಡ್ ಅಮರ್ ಪ್ರಿಂಟರ‍್ಸ್ ಮುದ್ರಣ ಸಂಸ್ಥೆಯ ಸಿಬಂದಿಗಳಿಗೆ ಗೌರವಾರ್ಪಣೆ ನಡೆಸಲಾಯಿತು.
ಕ್ಲಬ್ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿ,ವಂದಿಸಿದರು.ರಂಗ ಎಚ್ಕೆ ನಯನಾಡು ಅವರು ಕಾರ್ಯಕ್ರಮ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

2 days ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

2 days ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

2 days ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

4 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

4 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

4 days ago