ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ, ಆಟೋ ಚಾಲಕ ನೇಣು ಬಿಗಿದೆ ಸ್ಥಿತಿಯಲ್ಲಿ ಪತ್ತೆ..!
ಕಾಸರಗೋಡು : ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಕಯ್ಯಾರ್ ಮಂಡೆಕಾಪು ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಂಡೆಕಾಪುವಿನ ಪ್ರಿಯೇಶ್ ಚಂದ್ರಾವತಿ ದಂಪತಿ ಪುತ್ರಿ ಶ್ರೇಯಾ [15] ಮತ್ತು ಆಟೋ ಚಾಲಕ ಪ್ರದೀಪ್ [42] ಎಂದು ಗುರುತಿಸಲಾಗಿದೆ.
ಮನೆಯಿಂದ ಅರ್ಧ ಕಿ. ಮೀ ದೂರದ ಕಾಡಿನಲ್ಲಿ ಆದಿತ್ಯವಾರ ಬೆಳಿಗ್ಗೆ 10.30 ರ ವೇಳೆಗೆ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ಬಗ್ಗೆ ಲಭಿಸಿದ ದೂರಿನಂತೆ ಪೊಲೀಸರು ತನಿಖೆ ನಡೆಸಿದ್ದರು . ಆದರೆ ತಿಂಗಳಾಗುತ್ತಾ ಬಂದರೂ ಇಬ್ಬರ ಬಗ್ಗೆ ಯಾವುದೇ ಸುಳಿವು ಲಭಿಸದ ಹಿನ್ನಲೆಯಲ್ಲಿ ಶನಿವಾರದಿಂದ ಪೊಲೀಸರು ಹಾಗೂ ಸ್ಥಳೀಯರು ಮನೆ ಪರಿಸರದ ಕಾಡು ಕೇಂದ್ರೀಕರಿಸಿ ಶೋಧ ನಡೆಸಿದ್ದು, ಇಬ್ಬರ ಮೃತದೇಹ ಒಂದೇ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಎರಡು ಮೊಬೈಲ್ ಫೋನ್, ಒಂದು ಕತ್ತಿ ಪತ್ತೆಯಾಗಿದೆ.
ಫೆಬ್ರವರಿ 11 ರ ರಾತ್ರಿಯಿಂದ ಶ್ರೇಯಾ ದಿಢೀರ್ ನಾಪತ್ತೆಯಾಗಿದ್ದಳು. ಇದರ ಜೊತೆಗೆ ಪ್ರದೀಪ್ ನಾಪತ್ತೆಯಾಗಿದ್ದು ಇಬ್ಬರು ಪರಾರಿಯಾಗಿರಬಹುದೆಂದು ಶಂಕಿಸಲಾಗಿತ್ತು. ಮೊಬೈಲ್ ಟವರ್ ಕೇಂದ್ರೀಕರಿಸಿ ಮನೆ ಪರಿಸರ ಕಾಡು ಹಾಗೂ ಮನೆ ಕೇಂದ್ರೀಕರಿಸಿ ತನಿಖೆ ನಡೆಸಿದ್ದರು.ಪ್ರದೀಪ್ ನ ಸಂಬಂಧಿಕರಾದ ಮಡಿಕೇರಿ ಗೂ ತೆರಳಿ ಪೊಲೀಸರು ಈ ಹಿಂದೆ ತನಿಖೆ ನಡೆಸಿದ್ದರು. ಕುಂಬಳೆ ಠಾಣಾ ಪೊಲೀಸರು ಮಹಜರು ನಡೆಸಿದರು. ಶ್ರೇಯಾ ಸ್ಥಳೀಯ ಶಾಲೆಯೊಂದರ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದಳು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…