ಜನ ಮನದ ನಾಡಿ ಮಿಡಿತ

Advertisement

ಬಾಲಕಿಯರ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ!: ಆರೋಪಿ ಬಂಧನ

ಬಾಲಕಿಯರ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ!: ಆರೋಪಿ ಬಂಧನ

ಸಂಗಾರೆಡ್ಡಿ : ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕಿಸ್ತರೆಡ್ಡಿಪೇಟೆಯಲ್ಲಿ ನಡೆದ ಆಘಾತಕಾರಿ ಘಟನೆ ನಡೆದಿದ್ದು, ಖಾಸಗಿ ಮಹಿಳಾ ಹಾಸ್ಟೆಲ್ನಲ್ಲಿರುವ ರಹಸ್ಯ ಕ್ಯಾಮೆರಾ ಪತ್ತೆಯಾದ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್ ಮಹೇಶ್ವ‌ರ್ ರಾವ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾಮೆರಾ ಪತ್ತೆ

ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಕಾಣಿಸಿದ ಫೋನ್ ಚಾರ್ಜರ್ ಅನ್ನು ಗಮನಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಮೆರಾ ಚೆಕ್ ಮಾಡಿದಾಗ, ಅದು ರಹಸ್ಯವಾಗಿ ಅಳವಡಿಸಲಾದ ಸ್ಟೈ ಕ್ಯಾಮೆರಾ ಎಂಬುದು ಬಹಿರಂಗವಾಗಿದೆ. ಈ ವಿಷಯವನ್ನು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಆರೋಪಿಯ ಹಿಂದಿನ ಚರಿತ್ರೆ

ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಮಹೇಶ್ವ‌ರ್ ರಾವ್ ಪೂರ್ವದಲ್ಲಿಯೇ ತನ್ನ ಮನೆಯಲ್ಲಿ ಅಂತಹ ಕ್ಯಾಮೆರಾಗಳನ್ನು ಅಳವಡಿಸಿದ್ದನ್ನು ಪತ್ತೆ ಹಚ್ಚಿದ್ದಾರೆ. ತಾಯಿಯೊಂದಿಗೆ ಮತ್ತು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಈತ, ಅವರನ್ನು ಗಮನೆದಲ್ಲಿಟ್ಟುಕೊಳ್ಳಲು ಮೊದಲು ಮನೆಗೆ ರಹಸ್ಯ ಕ್ಯಾಮೆರಾ ಅಳವಡಿಸಿದ್ದ. ಬಳಿಕ, ತನ್ನ ಕರ್ತವ್ಯವನ್ನೇ ದುರುಪಯೋಗಪಡಿಸಿಕೊಂಡು ಹಾಸ್ಟೆಲ್‌ನ ಅಡುಗೆಮನೆ ಹಾಗೂ ವಿದ್ಯಾರ್ಥಿನಿಯರ ಕೊಠಡಿಗಳಲ್ಲಿಯೂ ಕ್ಯಾಮೆರಾ ಅಳವಡಿಸಿದ್ದ ಎಂದು ತಿಳಿದು ಬಂದಿದೆ. .

ಪೊಲೀಸರ ತನಿಖೆ ಮತ್ತು ಮುಂದಿನ ಕ್ರಮ
ಅಮೀನ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಾಸ್ಟೆಲ್‌ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮಹೇಶ್ವರ್ ರಾವ್ ಬಳಿಯಿಂದ ಹಲವು ಸ್ಟೈ ಕ್ಯಾಮೆರಾ ಚಿಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಡೇಟಾದಲ್ಲಿ ಎಷ್ಟು ಸಮಯದ ವಿಡಿಯೋಗಳು ದಾಖಲಾಗಿವೆ. ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಲಾಗಿದೆ ಅಥವಾ ಯಾರಾದರೂ ಮಾರಾಟ ಮಾಡಲಾಗಿದೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿಯುತ್ತಿದೆ. ಪೊಲೀಸರು ವಶಪಡಿಸಿಕೊಂಡಿರುವ ಕ್ಯಾಮೆರಾ ಮತ್ತು ಚಾರ್ಜರ್ ಅನ್ನು ವಿಧಿವಿಜ್ಞಾನ ಪ್ರಯೋಗಶಾಲೆಗೆ ಕಳುಹಿಸಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಬಹಿರಂಗವಾಗಲಿದೆ. ತನಿಖಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!