ಬಾಲಕಿಯರ ಹಾಸ್ಟೆಲ್ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ!: ಆರೋಪಿ ಬಂಧನ
ಸಂಗಾರೆಡ್ಡಿ : ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕಿಸ್ತರೆಡ್ಡಿಪೇಟೆಯಲ್ಲಿ ನಡೆದ ಆಘಾತಕಾರಿ ಘಟನೆ ನಡೆದಿದ್ದು, ಖಾಸಗಿ ಮಹಿಳಾ ಹಾಸ್ಟೆಲ್ನಲ್ಲಿರುವ ರಹಸ್ಯ ಕ್ಯಾಮೆರಾ ಪತ್ತೆಯಾದ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್ ಮಹೇಶ್ವರ್ ರಾವ್ ಅನ್ನು ಪೊಲೀಸರು ಬಂಧಿಸಿದ್ದಾರೆ.
ಕ್ಯಾಮೆರಾ ಪತ್ತೆ
ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಕಾಣಿಸಿದ ಫೋನ್ ಚಾರ್ಜರ್ ಅನ್ನು ಗಮನಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಮೆರಾ ಚೆಕ್ ಮಾಡಿದಾಗ, ಅದು ರಹಸ್ಯವಾಗಿ ಅಳವಡಿಸಲಾದ ಸ್ಟೈ ಕ್ಯಾಮೆರಾ ಎಂಬುದು ಬಹಿರಂಗವಾಗಿದೆ. ಈ ವಿಷಯವನ್ನು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಆರೋಪಿಯ ಹಿಂದಿನ ಚರಿತ್ರೆ
ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಮಹೇಶ್ವರ್ ರಾವ್ ಪೂರ್ವದಲ್ಲಿಯೇ ತನ್ನ ಮನೆಯಲ್ಲಿ ಅಂತಹ ಕ್ಯಾಮೆರಾಗಳನ್ನು ಅಳವಡಿಸಿದ್ದನ್ನು ಪತ್ತೆ ಹಚ್ಚಿದ್ದಾರೆ. ತಾಯಿಯೊಂದಿಗೆ ಮತ್ತು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಈತ, ಅವರನ್ನು ಗಮನೆದಲ್ಲಿಟ್ಟುಕೊಳ್ಳಲು ಮೊದಲು ಮನೆಗೆ ರಹಸ್ಯ ಕ್ಯಾಮೆರಾ ಅಳವಡಿಸಿದ್ದ. ಬಳಿಕ, ತನ್ನ ಕರ್ತವ್ಯವನ್ನೇ ದುರುಪಯೋಗಪಡಿಸಿಕೊಂಡು ಹಾಸ್ಟೆಲ್ನ ಅಡುಗೆಮನೆ ಹಾಗೂ ವಿದ್ಯಾರ್ಥಿನಿಯರ ಕೊಠಡಿಗಳಲ್ಲಿಯೂ ಕ್ಯಾಮೆರಾ ಅಳವಡಿಸಿದ್ದ ಎಂದು ತಿಳಿದು ಬಂದಿದೆ. .
ಪೊಲೀಸರ ತನಿಖೆ ಮತ್ತು ಮುಂದಿನ ಕ್ರಮ
ಅಮೀನ್ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಾಸ್ಟೆಲ್ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮಹೇಶ್ವರ್ ರಾವ್ ಬಳಿಯಿಂದ ಹಲವು ಸ್ಟೈ ಕ್ಯಾಮೆರಾ ಚಿಪ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಡೇಟಾದಲ್ಲಿ ಎಷ್ಟು ಸಮಯದ ವಿಡಿಯೋಗಳು ದಾಖಲಾಗಿವೆ. ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಲಾಗಿದೆ ಅಥವಾ ಯಾರಾದರೂ ಮಾರಾಟ ಮಾಡಲಾಗಿದೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿಯುತ್ತಿದೆ. ಪೊಲೀಸರು ವಶಪಡಿಸಿಕೊಂಡಿರುವ ಕ್ಯಾಮೆರಾ ಮತ್ತು ಚಾರ್ಜರ್ ಅನ್ನು ವಿಧಿವಿಜ್ಞಾನ ಪ್ರಯೋಗಶಾಲೆಗೆ ಕಳುಹಿಸಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಬಹಿರಂಗವಾಗಲಿದೆ. ತನಿಖಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…