ಬಂಟ್ವಾಳ; ಶ್ರೀ ನಡಿಯೇಲು ದೈಯ್ಯ೦ಗುಲು, ಶ್ರೀ ಉಳ್ಳಾಲ್ತಿ, ಶ್ರೀ ನಾಲ್ಕೆತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರ ಮಿತ್ತಮಜಲಿನಲ್ಲಿ ಏಪ್ರಿಲ್ 2ಮತ್ತು 3 ರಂದು ನವೀಕೃತ ಗೋಪುರಗಳ ಲೋಕಾರ್ಪಣೆ ಹಾಗೂ ಸಾನಿಧ್ಯ ಕಲಶಾಧಿ ಕಾರ್ಯಕ್ರಮಗಳು ನಡೆಯಲಿದೆ
ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಕಾರಣಿಕದ ಕ್ಷೇತ್ರ ಶ್ರೀ ನಡಿಯೇಲು ದೈಯ್ಯ೦ಗುಲು, ಶ್ರೀ ಉಳ್ಳಾಲ್ತಿ, ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರ ಮಿತ್ತಮಜಲಿನಲ್ಲಿ ಎಪ್ರಿಲ್ 2 ಮತ್ತು 3 ರಂದು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವೀಕೃತ ಗೋಪುರಗಳ ಲೋಕಾರ್ಪಣೆ ಹಾಗೂ ಸಾನಿಧ್ಯ ಕಲಶಾಧಿ ಕಾರ್ಯಕ್ರಮಗಳು ನಡೆಯಲಿದೆ.
02.04.2025ನೇ ಬುಧವಾರ ಸಂಜೆ 4.30ಕ್ಕೆ ಮಿತ್ತಮಜಲು ದ್ವಾರದಿಂದ ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಶೋಭಾಯಾತ್ರೆ ನಡೆಯಲಿದೆ. ಸಂಜೆ ಘಂಟೆ 5.30ರಿಂದ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕರಾದ ಅಜಯ್ ವಾರಿಯರ್ ಬೆಂಗಳೂರು ಮತ್ತು ಖ್ಯಾತ ಸಂಗೀತ ನಿರ್ದೇಶಕರಾದ
ಶ್ರೀ ಗುರುಕಿರಣ್ ಇವರ ಉಪಸ್ಥಿತಿಯಲ್ಲಿ ಭಕ್ತಿ ಗಾನ ಸಂಭ್ರಮ ನಡೆಯಲಿದೆ.
ಇನ್ನು ಕಾರ್ಯಕ್ರಮದ ಪೂರ್ವ ಸಿದ್ಧತೆಯ ಸಲುವಾಗಿ ಸಜೀಪ ಮೂಡದ ಬೇಂಕ್ಯದಲ್ಲಿ ಸಭೆಯನ್ನುನಡೆಸಲಾಯಿತು. ಈ ಸಮಯದಲ್ಲಿ ಸಜೀಪಮೂಡದ ಹಲವು ಸಂಘ ಸಂಸ್ಥೆಗಳಿಗೆ ಜವಬ್ದಾರಿಗಳನ್ನು ನೀಡಲಾಯಿತು. ಇನ್ನು ಈ ಸಮಯದಲ್ಲಿ ಜಯಶಂಕರ ಬಾಸ್ರಿತ್ತಾಯ, ಮಾಗಣೆ ತಂತ್ರಿಗಳಾದ ಎಮ್ ಸುಬ್ರಹ್ಮಣ್ಯ ಭಟ್ , ಶ್ರೀಕಾಂತ್ ಶೆಟ್ಟಿ ಸಂಕೇಶ, ಗಿರೀಶ್ ಕುಮಾರ್ ಪೆರ್ವ, ಕಿಶೋರ್ ಅಗರಿ, ಪುಷ್ಪ ರಮೇಶ್ ಪೆರ್ವ
ಜಯರಾಮ ಪೆರ್ವ, ಶ್ರೀ ದೇವಿಪ್ರಸಾದ್ ಪೂಂಜ, ಶಿವಪ್ರಸಾದ್ ಶೆಟ್ಟಿ ಹಾಗೂ ಚಂದ್ರಹಾಸ್ ಪೂಜಾರಿ ,ಪ್ರಹ್ಲಾದ್ ಬೇಂಕ್ಯ ಹಾಗೂ ಸರ್ವ ಸದಸ್ಯರೂ ಉಪಸ್ಥಿತರಿದ್ದರು
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…