ವಿಶೇಷ ವರದಿ

ಕಡಲು ಸೇರಿದ 115  ಕಡಲಾಮೆ ಮರಿಗಳು

ಕಡಲು ಸೇರಿದ 115  ಕಡಲಾಮೆ ಮರಿಗಳು

ತಾರಾಪತಿ : ಕಳೆದ 40 ದಿನಗಳ ಹಿಂದೆ ಮರವಂತೆ ಸಮುದ್ರ ತೀರ ಹಾಗೂ ಬೈಂದೂರಿನ ತಾರಾಪತಿ ಕಡಲ ಕಿನಾರೆಯಲ್ಲಿ ಕಡಲಾಮೆಗಳ ಮೊಟ್ಟೆಗಳನ್ನು ಸಂರಕ್ಷಣೆ ಮಾಡಿದ್ದು ಅದರಲ್ಲಿ ಮರವಂತೆ ‘ಹ್ಯಾಚರಿ’ಯಲ್ಲಿ ಗುರುವಾರ ರಾತ್ರಿ ಮೊಟ್ಟೆಗಳು ಒಡೆದು ಸುಮಾರು 115 ಮರಿಗಳು ಹೊರಬಂದು ಕಡಲು ಸೇರಿವೆ.

ಜನವರಿ ತಿಂಗಳ ಅಂತ್ಯದಲ್ಲಿ ಮರವಂತೆ ಹಾಗೂ ತಾರಾಪತಿ ಕಡಲ ತೀರದಲ್ಲಿ ಕಡಲಾಮೆಗಳು ಮೊಟ್ಟೆಗಳನ್ನಿಟ್ಟಿದ್ದವು. ಅದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಸಹಿತ ಈ ಬಗ್ಗೆ ಮುತುವರ್ಜಿ ವಹಿಸಲು ಆಸಕ್ತ ಸಂಘ- ಸಂಸ್ಥೆಗಳಿಗೆ ಮಾಹಿತಿ ನೀಡಿದ್ದರು. ಅದರಂತೆ ಮರವಂತೆ ಹಾಗೂ ತಾರಾಪತಿಯಲ್ಲಿ ಪ್ರತ್ಯೇಕ 2 ಹ್ಯಾಚರಿ ನಿರ್ಮಿಸಲಾಗಿತ್ತು. ಗುರುವಾರ ರಾತ್ರಿ ಮರವಂತೆ ಹ್ಯಾಚರಿಗಳಿಂದ ಒಟ್ಟು 115 ಕಡಲಾಮೆ ಮರಿಗಳು ಹೊರಕ್ಕೆ ಬಂದಿದ್ದು ಹೊರಕ್ಕೆ ಬಂದ ಕಡಲಾಮೆ ಮರಿಗಳು ನೈಸರ್ಗಿಕವಾಗಿ ಕಡಲು ಸೇರಲು ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಮೀನುಗಾರರು ಒಗ್ಗೂಡಿ ಅನುವು ಮಾಡಿಕೊಟ್ಟರು. ತಾರಾಪತಿಯ ಹ್ಯಾಚರಿಯಿಂದ ಮುಂದಿನ ವಾರದಲ್ಲಿ ಮರಿಗಳು ಬರುವ ನಿರೀಕ್ಷೆಯಿದೆ. ಸಮುದ್ರದಿಂದ ಹೊರಬಂದು ದಡದಲ್ಲಿ ಕಡಲಾಮೆಗಳು ಮೊಟ್ಟೆಯಿಟ್ಟ 48-60 ದಿನದಲ್ಲಿ ಮರಿಗಳು ಹೊರಬರುತ್ತವೆ. ಮೊಟ್ಟೆಗಳ ಸಂರಕ್ಷಣೆ, ವೀಕ್ಷಣೆ ಹಾಗೂ ಅಂತಿಮ ಫಲಿತಾಂಶದ ನಿಟ್ಟಿನಲ್ಲಿ 40ಕ್ಕೂ ಅಧಿಕ ದಿನಗಳಿಂದ ಮುತುವರ್ಜಿ ವಹಿಸಿದ್ದು ಮಾತ್ರವಲ್ಲದೇ ಮರಿಯೊಡೆಯುವ ರಾತ್ರಿ ತನಕವೂ ನಿಗಾವಹಿಸಿದ್ದ ಅರಣ್ಯ ಇಲಾಖೆ, ಸ್ಥಳೀಯರ ಕಾರ್ಯ ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರವಾಗಿದೆ. ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳನ್ನು ಅಲ್ಲಲ್ಲೇ ನೈಸರ್ಗಿಕವಾಗಿ ಹ್ಯಾಚರಿ ನಿರ್ಮಿಸುವ ಮೂಲಕ ಸಂರಕ್ಷಿಸಲಾಗಿತ್ತು. ಕಡಲಿನ ಸ್ವಚ್ಛತೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಅಳಿವಿನ ಅಂಚಲ್ಲಿರುವ ಕಡಲಾಮೆ ರಕ್ಷಣೆ ಆಗುತ್ತಿದೆ.

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

5 hours ago

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…

6 hours ago

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

  ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…

11 hours ago

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

  ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…

12 hours ago

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

3 days ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

3 days ago