ಜನ ಮನದ ನಾಡಿ ಮಿಡಿತ

Advertisement

ಜೈಲಿನಲ್ಲಿ ಆರೋಪಿ ನೇಣು ಬಿಗಿದು ಆತ್ಮಹತ್ಯೆ

ಜೈಲಿನಲ್ಲಿ ಆರೋಪಿ ನೇಣು ಬಿಗಿದು ಆತ್ಮಹತ್ಯೆ

ಮೂಡಬಿದ್ರಿ : ಕಳೆದ ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿ ಜೈಲಿನಲ್ಲಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಮೂಡುಬಿದಿರೆ ಲಾಡಿಯ ಪ್ರಕಾಶ್ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಆರೋಪಿಯಾಗಿದ್ದಾನೆ. ಪಕ್ಕದ ಮನೆಯ ಹದಿಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಲಾಡಿ ಅಜಂಕಲ್ಲು ನಿವಾಸಿ ಪ್ರಕಾಶ್ ಎಂಬವರನ್ನು ಮೂಡುಬಿದಿರೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಜೈಲಿನ ಬಿ ಬ್ಯಾರಕಿನ ಶೌಚಾಲಯದ ಕಿಟಕಿಯ ಸರಳುಗಳಿಗೆ ಆರೋಪಿ ಮುಂಜಾನೆ ಶಾಲಿನಿಂದ ನೇಣುಬಿಗಿದುಕೊಂಡಿದ್ದನ್ನು ಜೈಲಿನ ಭದ್ರತಾ ಸಿಬ್ಬಂದಿ ಗಮನಿಸಿದರು. ಆತನನ್ನು ತಕ್ಷಣವೇ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಜೈಲಿನ ವಾಹನದಲ್ಲಿ ಕರೆದೊಯ್ದಿದ್ದಾರೆ. ಆತ ಅಸುನೀಗಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆರೋಪಿ ಪ್ರಕಾಶ್ ವಿಪರೀತ ಕುಡಿತದ ಚಟ ಹೊಂದಿದ್ದ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಆತನಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿರಲಿಲ್ಲ. ಜೈಲಿನಿಂದ ತನ್ನನ್ನು ಬಿಡಿಸುವುದಕ್ಕೆ ಕುಟುಂಬಸ್ಥರು ಯಾರೂ ಬರುವುದಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಎಂದು ಜೈಲಿನ ಮೂಲಗಳು ತಿಳಿಸಿವೆ. ಆತ್ಮಹತ್ಯೆ ಕುರಿತು ಬರ್ಕೆ ಪೋಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!