ಕರಾವಳಿ

ದೈವ ದೇವಸ್ಥಾನಗಳ ಅಭಿವೃದ್ಧಿಯ ರೂವಾರಿ ಕೆ.ಸದಾಶಿವ ಶೆಟ್ಟಿ ಮುಂದಾಳತ್ವದಲ್ಲಿ ಮಧೂರು ದೇವಾಲಯಕ್ಕೆ ಹೊಸ ಕಳೆ

ಕಾಸರಗೋಡು ಜಿಲ್ಲೆಯ ಮಧೂರು ದೇವಾಲಯ ಪ್ರಾಚೀನ ಪರಂಪರೆ ಮತ್ತು ಐತಿಹಾಸಿಕ ಮಹತ್ವದ ದೇವಾಲಯ. ಅದೀಗ ಜೀರ್ಣೋದ್ಧಾರಗೊಂಡು ಆಧುನಿಕತೆಯ ಸ್ಪರ್ಶ ಪಡೆದಿದೆ.

ಕಾಸರಗೋಡಿನವರೇ ಆದ ಕನ್ಯಾನ ಸದಾಶಿವ ಶೆಟ್ಟಿ ಅವರ ಮುಂದಾಳತ್ವದಲ್ಲಿ ದೇವಾಲಯದ ಗೋಪುರ ನವೀಕೃತಗೊಂಡು ದೇವಾಲಯಕ್ಕೆ ಹೊಸ ಕಳೆ ತಂದಿದೆ. ಮುಂಬಯಿಯಲ್ಲಿ ರಾಸಾಯನಿಕ ಉದ್ಯಮ ಮತ್ತು ಗುಜರಾತಿನಲ್ಲಿ ಔಷಧಿಗಳಲ್ಲಿ ಬಳಸುವ ರಾಸಾಯನಿಕಗಳ ತಯಾರಿಕಾ ಘಟಕಗಳನ್ನು ಹೊಂದಿರುವ ಕನ್ಯಾನ ಸದಾಶಿವ ಶೆಟ್ಟಿ ಅವರ ಉದ್ಯಮ ಸಂಸ್ಥೆಯ ಹೆಸರು ಹೇರಂಭಾ ಇಂಡಸ್ಟ್ರೀಸ್. ಗಣಪತಿಯ ಪರಮ ಭಕ್ತರಾಗಿರುವ ಅವರು ಸುಮಾರು ಒಂದೂವರೆ ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ದೇವಾಲಯದ ಚೆಲುವನ್ನು ಹೆಚ್ಚಿಸುವ ಪ್ರಧಾನ ಗೋಪುರವನ್ನು ನಿರ್ಮಿಸಿ ಮೂಡಪ್ಪ ಪ್ರಿಯ ಮಧೂರು ಗಣಪತಿಗೆ ಸಮರ್ಪಿಸುತ್ತಿದ್ದಾರೆ. ಪಾದುಕಾ ಮೂಲದಿಂದ ನಲವತ್ತು ಅಡಿ ಎತ್ತರವಿರುವ ಈ ಗೋಪುರ ಮೂರು ಅಂತಸ್ತುಗಳನ್ನು ಹೊಂದಿದೆ. ಗೋಪುರವು ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿದೆ .ಮಧೂರು ದೇವಾಲಯದಲ್ಲಿ ಪೂಜಿಸುವ ಎಲ್ಲಾ ದೇವರ ವಿಗ್ರಹಗಳನ್ನು ಗೋಪುರದಲ್ಲಿ ನೆಲೆಗೊಳಿಸಲಾಗಿದೆ. ಕೃಷ್ಣ ಶಿಲೆಯಲ್ಲಿ ಕೆತ್ತಿದ ಶಿವ, ಗಣಪತಿ, ಪಾರ್ವತಿ ವಿಗ್ರಹಗಳು ಗೋಪುರಕ್ಕೆ ದೈವಿಕ ಕಳೆಯನ್ನು ನೀಡಿವೆ.

ಒಂಭತ್ತು ತಿಂಗಳುಗಳಲ್ಲಿ ಗೋಪುರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಗೋಪುರದ ವಾಸ್ತು ವಿನ್ಯಾಸವನ್ನು ಪ್ರಸಾದ್ ಮುನಿಯಂಗಳ ಅವರು ರೂಪಿಸಿದ್ದರೆ, ಶಿಲಾ ವಿನ್ಯಾಸದ ಹೊಣೆಗಾರಿಕೆ ಬಂಟ್ವಾಳದ ಸದಾಶಿವ ಶೆಣೈ ಅವರದ್ದು. ರಮೇಶ್ ಲಾಯಿಲ ಬೆಳ್ತಂಗಡಿ ಅವರ ನೇತೃತ್ವದ ನುರಿತ ಶಿಲ್ಪಿಗಳ ತಂಡ ಇದನ್ನು ಕಾರ್ಯರೂಪಕ್ಕೆ ತಂದಿದೆ. ವಾಸ್ತು ಜತೆ ದೈವಿಕ ಕಳೆಯ ಸಮ್ಮಿಲನ ಗೋಪುರವನ್ನು ಅಕರಶಃ ರಾಜಗೋಪುರವನ್ನಾಗಿಸಿದೆ. ಕೈ ಮುಗಿದು ಒಳಗೆ ಬಾ ಯಾತ್ರಿಕನೇ ಎನ್ನುತ್ತಿದೆ ಅದು.

 

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

16 hours ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

16 hours ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

16 hours ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

2 days ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

2 days ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

2 days ago