ಜನ ಮನದ ನಾಡಿ ಮಿಡಿತ

Advertisement

ಆಡಲು ಹೋದ ಮಕ್ಕಳಿಬ್ಬರು ಟ್ಯಾಂಕಿಗೆ ಬಿದ್ದು ಸಾವು

ತಾಲೂಕಿನ ಕೋಳಕೂರ ಗ್ರಾಮದಲ್ಲಿ ಮಕ್ಕಳಿಬ್ಬರು ಮನೆ ಮುಂದಿನ ಸೆಪ್ಟಿಕ್ ಟ್ಯಾಂಕ್‌ ನಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತಿಪ್ಪಣ್ಣ ಜಡಿ ಅವರ ಮಗ ಗಿರೀಶ್ (3) ಹಾಗೂ ಅವರ ಸಹೋದರಿ ಐಶ್ವರ್ಯ ಹೇರೂರ ಅವರ ಒಂದೂವರೆ ವರ್ಷದ ಮಗಳು ಶ್ರೇಷ್ಠ ಮೃತಪಟ್ಟವರು. ಬೆಳಗಿನ ಉಪಾಹಾರ ಸೇವಿಸಿದ ನಂತರ ಇವರು ಹೊರಗಡೆ ಆಡಲು ಹೋದಾಗ ಈ ಅವಘಡ ಸಂಭವಿಸಿದೆ.

ಅರ್ಧ ಗಂಟೆ ಕಳೆದರೂ ಮಕ್ಕಳು ಕಾಣಿಸದಿದ್ದಾಗ ಮನೆಯವರು ಹಾಗೂ ಅಕ್ಕಪಕ್ಕದವರು ಎರಡೂವರೆ ತಾಸು ಹುಡುಕಿದ್ದಾರೆ. ಎಲ್ಲಿಯೂ ಸಿಗದ ಕಾರಣಕ್ಕೆ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದಾಗ ತಕ್ಷಣವೇ ಬಂದು ಮಾಹಿತಿ ಕಲೆ ಹಾಕಿದರು. ಮನೆ ಮುಂದಿನ ಟ್ಯಾಂಕ್ ಇರುವ ವಿಷಯ ತಿಳಿದು ಅದರಲ್ಲಿ ನೋಡಿದಾಗ ಮಕ್ಕಳು ಮೃತಪಟ್ಟಿದ್ದವು.

ತಿಪ್ಪಣ್ಣ ಜಡಿ ಅವರ ಸಹೋದರಿ ಐಶ್ವರ್ಯ ಎರಡನೇ ಹೆರಿಗೆಗೆ ತವರು ಮನೆಗೆ ಆಗಮಿಸಿದ್ದಳು. ಮೊದಲನೆ ಮಗಳು ಶ್ರೇಷ್ಠ ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೃತಪಟ್ಟಿದ್ದಾಳೆ. ತಿಪ್ಪಣ್ಣ ಜಡಿಯವರ ಮೂರು ಮಕ್ಕಳಲ್ಲಿ ಕೊನೆಯ ಮಗ ಗಿರೀಶ್ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!