ಜನ ಮನದ ನಾಡಿ ಮಿಡಿತ

Advertisement

ಆಡಲು ಹೋದ ಮಕ್ಕಳಿಬ್ಬರು ಟ್ಯಾಂಕಿಗೆ ಬಿದ್ದು ಸಾವು

ತಾಲೂಕಿನ ಕೋಳಕೂರ ಗ್ರಾಮದಲ್ಲಿ ಮಕ್ಕಳಿಬ್ಬರು ಮನೆ ಮುಂದಿನ ಸೆಪ್ಟಿಕ್ ಟ್ಯಾಂಕ್‌ ನಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತಿಪ್ಪಣ್ಣ ಜಡಿ ಅವರ ಮಗ ಗಿರೀಶ್ (3) ಹಾಗೂ ಅವರ ಸಹೋದರಿ ಐಶ್ವರ್ಯ ಹೇರೂರ ಅವರ ಒಂದೂವರೆ ವರ್ಷದ ಮಗಳು ಶ್ರೇಷ್ಠ ಮೃತಪಟ್ಟವರು. ಬೆಳಗಿನ ಉಪಾಹಾರ ಸೇವಿಸಿದ ನಂತರ ಇವರು ಹೊರಗಡೆ ಆಡಲು ಹೋದಾಗ ಈ ಅವಘಡ ಸಂಭವಿಸಿದೆ.

ಅರ್ಧ ಗಂಟೆ ಕಳೆದರೂ ಮಕ್ಕಳು ಕಾಣಿಸದಿದ್ದಾಗ ಮನೆಯವರು ಹಾಗೂ ಅಕ್ಕಪಕ್ಕದವರು ಎರಡೂವರೆ ತಾಸು ಹುಡುಕಿದ್ದಾರೆ. ಎಲ್ಲಿಯೂ ಸಿಗದ ಕಾರಣಕ್ಕೆ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದಾಗ ತಕ್ಷಣವೇ ಬಂದು ಮಾಹಿತಿ ಕಲೆ ಹಾಕಿದರು. ಮನೆ ಮುಂದಿನ ಟ್ಯಾಂಕ್ ಇರುವ ವಿಷಯ ತಿಳಿದು ಅದರಲ್ಲಿ ನೋಡಿದಾಗ ಮಕ್ಕಳು ಮೃತಪಟ್ಟಿದ್ದವು.

ತಿಪ್ಪಣ್ಣ ಜಡಿ ಅವರ ಸಹೋದರಿ ಐಶ್ವರ್ಯ ಎರಡನೇ ಹೆರಿಗೆಗೆ ತವರು ಮನೆಗೆ ಆಗಮಿಸಿದ್ದಳು. ಮೊದಲನೆ ಮಗಳು ಶ್ರೇಷ್ಠ ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೃತಪಟ್ಟಿದ್ದಾಳೆ. ತಿಪ್ಪಣ್ಣ ಜಡಿಯವರ ಮೂರು ಮಕ್ಕಳಲ್ಲಿ ಕೊನೆಯ ಮಗ ಗಿರೀಶ್ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!