ತಾಲೂಕಿನ ಕೋಳಕೂರ ಗ್ರಾಮದಲ್ಲಿ ಮಕ್ಕಳಿಬ್ಬರು ಮನೆ ಮುಂದಿನ ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತಿಪ್ಪಣ್ಣ ಜಡಿ ಅವರ ಮಗ ಗಿರೀಶ್ (3) ಹಾಗೂ ಅವರ ಸಹೋದರಿ ಐಶ್ವರ್ಯ ಹೇರೂರ ಅವರ ಒಂದೂವರೆ ವರ್ಷದ ಮಗಳು ಶ್ರೇಷ್ಠ ಮೃತಪಟ್ಟವರು. ಬೆಳಗಿನ ಉಪಾಹಾರ ಸೇವಿಸಿದ ನಂತರ ಇವರು ಹೊರಗಡೆ ಆಡಲು ಹೋದಾಗ ಈ ಅವಘಡ ಸಂಭವಿಸಿದೆ.
ಅರ್ಧ ಗಂಟೆ ಕಳೆದರೂ ಮಕ್ಕಳು ಕಾಣಿಸದಿದ್ದಾಗ ಮನೆಯವರು ಹಾಗೂ ಅಕ್ಕಪಕ್ಕದವರು ಎರಡೂವರೆ ತಾಸು ಹುಡುಕಿದ್ದಾರೆ. ಎಲ್ಲಿಯೂ ಸಿಗದ ಕಾರಣಕ್ಕೆ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದಾಗ ತಕ್ಷಣವೇ ಬಂದು ಮಾಹಿತಿ ಕಲೆ ಹಾಕಿದರು. ಮನೆ ಮುಂದಿನ ಟ್ಯಾಂಕ್ ಇರುವ ವಿಷಯ ತಿಳಿದು ಅದರಲ್ಲಿ ನೋಡಿದಾಗ ಮಕ್ಕಳು ಮೃತಪಟ್ಟಿದ್ದವು.
ತಿಪ್ಪಣ್ಣ ಜಡಿ ಅವರ ಸಹೋದರಿ ಐಶ್ವರ್ಯ ಎರಡನೇ ಹೆರಿಗೆಗೆ ತವರು ಮನೆಗೆ ಆಗಮಿಸಿದ್ದಳು. ಮೊದಲನೆ ಮಗಳು ಶ್ರೇಷ್ಠ ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೃತಪಟ್ಟಿದ್ದಾಳೆ. ತಿಪ್ಪಣ್ಣ ಜಡಿಯವರ ಮೂರು ಮಕ್ಕಳಲ್ಲಿ ಕೊನೆಯ ಮಗ ಗಿರೀಶ್ ಮೃತಪಟ್ಟಿದ್ದಾನೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…