ತಾಲೂಕಿನ ಕೋಳಕೂರ ಗ್ರಾಮದಲ್ಲಿ ಮಕ್ಕಳಿಬ್ಬರು ಮನೆ ಮುಂದಿನ ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತಿಪ್ಪಣ್ಣ ಜಡಿ ಅವರ ಮಗ ಗಿರೀಶ್ (3) ಹಾಗೂ ಅವರ ಸಹೋದರಿ ಐಶ್ವರ್ಯ ಹೇರೂರ ಅವರ ಒಂದೂವರೆ ವರ್ಷದ ಮಗಳು ಶ್ರೇಷ್ಠ ಮೃತಪಟ್ಟವರು. ಬೆಳಗಿನ ಉಪಾಹಾರ ಸೇವಿಸಿದ ನಂತರ ಇವರು ಹೊರಗಡೆ ಆಡಲು ಹೋದಾಗ ಈ ಅವಘಡ ಸಂಭವಿಸಿದೆ.
ಅರ್ಧ ಗಂಟೆ ಕಳೆದರೂ ಮಕ್ಕಳು ಕಾಣಿಸದಿದ್ದಾಗ ಮನೆಯವರು ಹಾಗೂ ಅಕ್ಕಪಕ್ಕದವರು ಎರಡೂವರೆ ತಾಸು ಹುಡುಕಿದ್ದಾರೆ. ಎಲ್ಲಿಯೂ ಸಿಗದ ಕಾರಣಕ್ಕೆ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದಾಗ ತಕ್ಷಣವೇ ಬಂದು ಮಾಹಿತಿ ಕಲೆ ಹಾಕಿದರು. ಮನೆ ಮುಂದಿನ ಟ್ಯಾಂಕ್ ಇರುವ ವಿಷಯ ತಿಳಿದು ಅದರಲ್ಲಿ ನೋಡಿದಾಗ ಮಕ್ಕಳು ಮೃತಪಟ್ಟಿದ್ದವು.
ತಿಪ್ಪಣ್ಣ ಜಡಿ ಅವರ ಸಹೋದರಿ ಐಶ್ವರ್ಯ ಎರಡನೇ ಹೆರಿಗೆಗೆ ತವರು ಮನೆಗೆ ಆಗಮಿಸಿದ್ದಳು. ಮೊದಲನೆ ಮಗಳು ಶ್ರೇಷ್ಠ ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೃತಪಟ್ಟಿದ್ದಾಳೆ. ತಿಪ್ಪಣ್ಣ ಜಡಿಯವರ ಮೂರು ಮಕ್ಕಳಲ್ಲಿ ಕೊನೆಯ ಮಗ ಗಿರೀಶ್ ಮೃತಪಟ್ಟಿದ್ದಾನೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…