ತಾಲೂಕಿನ ಕೋಳಕೂರ ಗ್ರಾಮದಲ್ಲಿ ಮಕ್ಕಳಿಬ್ಬರು ಮನೆ ಮುಂದಿನ ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತಿಪ್ಪಣ್ಣ ಜಡಿ ಅವರ ಮಗ ಗಿರೀಶ್ (3) ಹಾಗೂ ಅವರ ಸಹೋದರಿ ಐಶ್ವರ್ಯ ಹೇರೂರ ಅವರ ಒಂದೂವರೆ ವರ್ಷದ ಮಗಳು ಶ್ರೇಷ್ಠ ಮೃತಪಟ್ಟವರು. ಬೆಳಗಿನ ಉಪಾಹಾರ ಸೇವಿಸಿದ ನಂತರ ಇವರು ಹೊರಗಡೆ ಆಡಲು ಹೋದಾಗ ಈ ಅವಘಡ ಸಂಭವಿಸಿದೆ.
ಅರ್ಧ ಗಂಟೆ ಕಳೆದರೂ ಮಕ್ಕಳು ಕಾಣಿಸದಿದ್ದಾಗ ಮನೆಯವರು ಹಾಗೂ ಅಕ್ಕಪಕ್ಕದವರು ಎರಡೂವರೆ ತಾಸು ಹುಡುಕಿದ್ದಾರೆ. ಎಲ್ಲಿಯೂ ಸಿಗದ ಕಾರಣಕ್ಕೆ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದಾಗ ತಕ್ಷಣವೇ ಬಂದು ಮಾಹಿತಿ ಕಲೆ ಹಾಕಿದರು. ಮನೆ ಮುಂದಿನ ಟ್ಯಾಂಕ್ ಇರುವ ವಿಷಯ ತಿಳಿದು ಅದರಲ್ಲಿ ನೋಡಿದಾಗ ಮಕ್ಕಳು ಮೃತಪಟ್ಟಿದ್ದವು.
ತಿಪ್ಪಣ್ಣ ಜಡಿ ಅವರ ಸಹೋದರಿ ಐಶ್ವರ್ಯ ಎರಡನೇ ಹೆರಿಗೆಗೆ ತವರು ಮನೆಗೆ ಆಗಮಿಸಿದ್ದಳು. ಮೊದಲನೆ ಮಗಳು ಶ್ರೇಷ್ಠ ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೃತಪಟ್ಟಿದ್ದಾಳೆ. ತಿಪ್ಪಣ್ಣ ಜಡಿಯವರ ಮೂರು ಮಕ್ಕಳಲ್ಲಿ ಕೊನೆಯ ಮಗ ಗಿರೀಶ್ ಮೃತಪಟ್ಟಿದ್ದಾನೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…