ತಾಲೂಕಿನ ಕೋಳಕೂರ ಗ್ರಾಮದಲ್ಲಿ ಮಕ್ಕಳಿಬ್ಬರು ಮನೆ ಮುಂದಿನ ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತಿಪ್ಪಣ್ಣ ಜಡಿ ಅವರ ಮಗ ಗಿರೀಶ್ (3) ಹಾಗೂ ಅವರ ಸಹೋದರಿ ಐಶ್ವರ್ಯ ಹೇರೂರ ಅವರ ಒಂದೂವರೆ ವರ್ಷದ ಮಗಳು ಶ್ರೇಷ್ಠ ಮೃತಪಟ್ಟವರು. ಬೆಳಗಿನ ಉಪಾಹಾರ ಸೇವಿಸಿದ ನಂತರ ಇವರು ಹೊರಗಡೆ ಆಡಲು ಹೋದಾಗ ಈ ಅವಘಡ ಸಂಭವಿಸಿದೆ.
ಅರ್ಧ ಗಂಟೆ ಕಳೆದರೂ ಮಕ್ಕಳು ಕಾಣಿಸದಿದ್ದಾಗ ಮನೆಯವರು ಹಾಗೂ ಅಕ್ಕಪಕ್ಕದವರು ಎರಡೂವರೆ ತಾಸು ಹುಡುಕಿದ್ದಾರೆ. ಎಲ್ಲಿಯೂ ಸಿಗದ ಕಾರಣಕ್ಕೆ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದಾಗ ತಕ್ಷಣವೇ ಬಂದು ಮಾಹಿತಿ ಕಲೆ ಹಾಕಿದರು. ಮನೆ ಮುಂದಿನ ಟ್ಯಾಂಕ್ ಇರುವ ವಿಷಯ ತಿಳಿದು ಅದರಲ್ಲಿ ನೋಡಿದಾಗ ಮಕ್ಕಳು ಮೃತಪಟ್ಟಿದ್ದವು.
ತಿಪ್ಪಣ್ಣ ಜಡಿ ಅವರ ಸಹೋದರಿ ಐಶ್ವರ್ಯ ಎರಡನೇ ಹೆರಿಗೆಗೆ ತವರು ಮನೆಗೆ ಆಗಮಿಸಿದ್ದಳು. ಮೊದಲನೆ ಮಗಳು ಶ್ರೇಷ್ಠ ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೃತಪಟ್ಟಿದ್ದಾಳೆ. ತಿಪ್ಪಣ್ಣ ಜಡಿಯವರ ಮೂರು ಮಕ್ಕಳಲ್ಲಿ ಕೊನೆಯ ಮಗ ಗಿರೀಶ್ ಮೃತಪಟ್ಟಿದ್ದಾನೆ.
ನಂದಿನಿ ಲೇಔಟ್ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದ…
ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ…
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು…
ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಮೃತದೇಹ ಪತ್ತೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್…
ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ. ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ…
ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ…