ಬೈಕ್ ನ ಮೇಲೆ ದೊಡ್ಡ ಗಾತ್ರದ ಮಾವಿನ ಮರದ ಕೊಂಬೆ ಬಿದ್ದು ಸವಾರ ಸಾವನ್ನಪ್ಪಿದ ದಾರುಣ ಘಟನೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಗುರುವಾರ ರಾತ್ರಿ 8 ಗಂಟೆಗೆ ನಡೆದಿದೆ.
ಬೆಳಾಲು ಪೆರಿಯಡ್ಕ ಸಮೀಪದ ಕರ್ಪುದ ಗುಡ್ಡೆ ನಿವಾಸಿ ಸಂಜೀವ ಅವರ ಅವಳಿ ಮಕ್ಕಳಲ್ಲಿ ಹಿರಿಯವನಾಗಿದ್ದ ಪ್ರವೀಣ ಎಸ್. ಎಲ್. (25) ಮೃತ ದುರ್ದೈವಿ.
ಮಾವಿನ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…