ಬೈಕ್ ನ ಮೇಲೆ ದೊಡ್ಡ ಗಾತ್ರದ ಮಾವಿನ ಮರದ ಕೊಂಬೆ ಬಿದ್ದು ಸವಾರ ಸಾವನ್ನಪ್ಪಿದ ದಾರುಣ ಘಟನೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಗುರುವಾರ ರಾತ್ರಿ 8 ಗಂಟೆಗೆ ನಡೆದಿದೆ.
ಬೆಳಾಲು ಪೆರಿಯಡ್ಕ ಸಮೀಪದ ಕರ್ಪುದ ಗುಡ್ಡೆ ನಿವಾಸಿ ಸಂಜೀವ ಅವರ ಅವಳಿ ಮಕ್ಕಳಲ್ಲಿ ಹಿರಿಯವನಾಗಿದ್ದ ಪ್ರವೀಣ ಎಸ್. ಎಲ್. (25) ಮೃತ ದುರ್ದೈವಿ.
ಮಾವಿನ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಂದಿನಿ ಲೇಔಟ್ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದ…
ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ…
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು…
ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಮೃತದೇಹ ಪತ್ತೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್…
ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ. ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ…
ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ…