ಚಿಕ್ಕ ಪ್ರಾಯದಲ್ಲೇ ಕಲಾ ಆಸಕ್ತಿಯನ್ನು ಬೆಳೆಸಿ, ಕಲಾ ಆರಾಧನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವವರು ಸುರೇಂದ್ರ ಪೂಜಾರಿ ಮತ್ತು ನಳಿನಿ ದಂಪತಿಗಳ ಪುತ್ರಿ ಸೃಜನಿ ಪೂಜಾರಿ.
ಸೃಜನಿ ಚಿಕ್ಕಂದಿನಿಂದಲೆ ತನ್ನನ್ನು ತಾನು ನಾಟ್ಯಾಭ್ಯಾಸದಲ್ಲಿ ತೊಡಗಿಸಿಕೊಂಡು ಅನೇಕ ಕಡೆಗಳಲ್ಲಿ ನೃತ್ಯ ಪ್ರದರ್ಶನವನ್ನು ನೀಡಿರುತ್ತಾರೆ. ಕೇವಲ ನಾಟ್ಯದಲ್ಲಿ ಮಾತ್ರ ಪ್ರವೀಣೆ ಆಗದೆ ಬಾಲ್ಯದಿಂದಲೂ ಯೋಗ,ಚೆಸ್,ಪ್ರಬಂಧ ,ಕಥೆ, ಭಾಷಣ ಹೀಗೆ ಕ್ರೀಡಾ ಕ್ಷೇತ್ರ ಮತ್ತು ಬರವಣಿಗೆ ಕ್ಷೇತ್ರದಲ್ಲಿ ತನ್ನನು ತಾನು ತೊಡಗಿಸಿ ಕೊಂಡಿದ್ದಾರೆ. ಜೊತೆಗೆ ಉತ್ತಮವಾದ ಮಾತುಗಾರಿಕೆ ನಿರೂಪಣೆ ಕ್ಷೇತ್ರದತ್ತವಾಲುವಂತೆ ಮಾಡುತ್ತದೆ. ಹಲವು ಕಾರ್ಯಕ್ರಮಗಳಲ್ಲಿ ನಿರೂಪಣೆಯನ್ನು ಮಾಡಿ ಸೈ ಎಂದು ಎನಿಸಿಕೊಂಡಿದ್ದಾರೆ.
ಶಾಲಾ ದಿನಗಳಲ್ಲಿ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುತ್ತಾಳೆ . ಕೇವಲ ನಾಟ್ಯ , ಆಟ , ಸಾಹಿತ್ಯ ಆಸಕ್ತಿಯ ಜೊತೆಗೆ ಕಲಿಕೆಯಲ್ಲೂ ಈಕೆ ಜಾಣೆಯಾಗಿದ್ದಳು . ಅಲ್ಲದೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ 96 ಶೇಕಡಾ ಅಂಕವನ್ನು ಪಡೆದು .ತನ್ನ ಉಜ್ವಲವಾದ ಕಲಾ ಕಲಿಕೆ ಜರ್ನಿಯೊಂದಿದೆ ಹೆಜ್ಜೆ ಹಾಕ್ತಾ ಇದ್ದಾರೆ . ವಾಯ್ಸ್ ಆಫ್ ಆರಾಧನ ತಂಡದ ಪ್ರತಿಭೆಯಾಗಿದ್ದು , ಈ ತಂಡದ ನೇತೃತ್ವದಲ್ಲಿ ನಡೆದ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಸಿದ್ದಾಳೆ. ಜೊತೆಗೆ ಕರಾವಳಿಯ ಜನಮನದ ನಾಡಿಮಿಡಿತವಾದ ಅಭಿಮತ ವಾಹಿನಿಯಲ್ಲಿ ಪ್ರಸಾರವಾಗುವ ಪ್ರತಿಭಾ ಲೋಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಾ ಕೌಶಲ್ಯವನ್ನು ತೋರಿಸಿದ್ದಾರೆ .
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…