ಇಲ್ಲಿನ ಸಂಪೀಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್ವೊಂದ ಸಪ್ಲೈಯರ್ ಬ್ಯಾಗ್ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಬೆಳ್ಳಳ್ಳಿಯ ಅಬ್ದುಲ್ ರೆಹಮಾನ್ ಎನ್ನುವಾತನ ಬ್ಯಾಗ್ನಲ್ಲಿ ಹ್ಯಾಂಡ್ ಗ್ರನೇಡ್ ಸಿಕ್ಕಿದೆ.
ಹೋಟೆಲ್ ಸಿಬ್ಬಂದಿಯೊಬ್ಬರು, ಆಧಾರ್ ಕಾರ್ಡ್ಗಾಗಿ ಅಬ್ದುಲ್ ರೆಹಮಾನ್ನ ಬ್ಯಾಗ್ ಪರಿಶೀಲಿಸಿದಾಗ ಗ್ರೇನೆಡ್ ಪತ್ತೆಯಾಗಿದೆ. ಕೂಡಲೇ ಹೋಟೆಲ್ನವರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಸಂಪೀಗೆಹಳ್ಳಿ ಪೊಲೀಸರು ಮೊದಲಿಗೆ ಹೋಟೆಲ್ನವರಿಂದ ಮಾಹಿತಿ ಪಡೆದುಕೊಂಡು ನಂತರ ರೆಹಮಾನ್ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರನೇಡ್ ಕಂಡುಬಂದಿದೆ.
ಸದ್ಯ ಅಬ್ದುಲ್ ರೆಹಮಾನ್ ಹಾಗೂ ಈತನ ಬ್ಯಾಗ್ನಲ್ಲಿ ಸಿಕ್ಕ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಬ್ ಮಾದರಿಯ ಸ್ಫೋಟಕವನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಮತ್ತೊಂದೆಡೆ ಕೋಗಿಕ್ರಾಸ್ ಬಳಿಯ ಬೆಳ್ಳಳ್ಳಿಯ ನಿವಾಸಿಯಾಗಿರುವ ಅಬ್ಧುಲ್ ರೆಹಮಾನ್ ನನ್ನು ಪೊಲೀಸರು ತೀವ್ರ ವಿಚಾರಣೆಗೊಳೊಡಿಸಿದ್ದಾರೆ.
ಅಬ್ದುಲ್ ರೆಹಮಾನ್ ತಾನು ಬೆಳ್ಳಹಳ್ಳಿಯ ನಿವಾಸಿ ಎಂದು ಹೇಳಿಕೊಂಡು ವೈಭವ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ. ಬಳಿಕ ಹೋಟೆಲ್ನವರು ಆಧಾರ್ ಕಾರ್ಡ್ ಕೇಳಿದ್ದಾರೆ. ಆದ್ರೆ ಆತ ಕಾರ್ಡ್ ಕೇಳಿದಾಗ ಕೊಟ್ಟಿಲ್ಲ. ಎರಡು ದಿನಗಳು ಕಳೆದರೂ ಸಹ ಆಧಾರ್ ಕಾರ್ಡ್ ಕೊಟ್ಟಿಲ್ಲ. ಇದರಿಂದ ಹೋಟೆಲ್ ಸಿಬ್ಬಂದಿಯೊಬ್ಬರು ಶೆಡ್ನಲ್ಲಿದ್ದ ರೆಹಮಾನ್ನ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರನೇಡ್ ಪತ್ತೆಯಾಗಿದೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…