ಇತರೆ

ಉತ್ತರ ಪ್ರದೇಶ: ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ

ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.

ವ್ಯಕ್ತಿಗೆ ತುಂಬಾ ದಿನಗಳಿಂದ ಹೊಟ್ಟೆ ನೋವು ಬರುತ್ತಿತ್ತು, ಹಲವು ವೈದ್ಯರನ್ನು ಸಂಪರ್ಕಿಸಿದರೂ ಸಮಸ್ಯೆ ಪರಿಹಾರವಾಗದಿದ್ದಾಗ ತನಗೆ ತಾನೇ ಸರ್ಜರಿ ಮಾಡಿಕೊಳ್ಳುವುದು ಸೂಕ್ತ ಎಂದು ನಿರ್ಧರಿಸಿದ್ದ. ಯೂಟ್ಯೂಬ್‌ನಲ್ಲಿ ಹಲವಾರು ವೀಡಿಯೊಗಳನ್ನು ನೋಡಿದ ನಂತರ, ಔಷಧ ಅಂಗಡಿಯಿಂದ ಔಷಧಿಗಳನ್ನು ಖರೀದಿ ಮಾಡಿದ್ದ.

ನಂತರ ಯೂಟ್ಯೂಬ್​ನಲ್ಲಿ ನೋಡಿದ ಆಧಾರದ ಮೇಲೆ ಸ್ವತಃ ಶಸ್ತ್ರಚಿಕಿತ್ಸೆಗೆ ಪ್ರಯತ್ನಿಸಿದ್ದು ಅವರ ಸ್ಥಿತಿ ಹದಗೆಟ್ಟಾಗ, ಅವರ ಕುಟುಂಬವು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿತು.

ರಾಜಾ ಬಾಬು ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ವೈದ್ಯರನ್ನು ಸಂಪರ್ಕಿಸಿದ ನಂತರವೂ ಅವರ ನೋವು ಕಡಿಮೆಯಾಗಲಿಲ್ಲ. ನೋವು ಅಸಹನೀಯವಾದಾಗ, ಅವರು ಮಥುರಾಗೆ ಹೋಗಿ ಶಸ್ತ್ರಚಿಕಿತ್ಸಾ ಬ್ಲೇಡ್, ಹೊಲಿಗೆ ಸಾಮಗ್ರಿಗಳು ಮತ್ತು ಅರಿವಳಿಕೆ ಇಂಜೆಕ್ಷನ್‌ಗಳನ್ನು ಖರೀದಿಸಿದ್ದ. ಬುಧವಾರ ತಮ್ಮ ಕೋಣೆಯಲ್ಲಿ ಕುಳಿತು ಶಸ್ತ್ರ ಚಿಕಿತ್ಸೆ ಮಾಡಲು ಪ್ರಾರಂಭಿಸಿದ್ದ.

ಸ್ವಲ್ಪ ಸಮಯದ ಬಳಿಕ ಅರವಳಿಕೆ ಪರಿಣಾಮ ಕಡಿಮೆಯಾದಾಗ ತೀವ್ರ ನೋವು ಶುರುವಾಗಿ ಅರಚಲಾರಂಭಿಸಿದ್ದರು. ಕೂಡಲೇ ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಾರು 18 ವರ್ಷಗಳ ಹಿಂದೆ ರಾಜಾ ಬಾಬು ಅವರಿಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು ಎಂದು ಮನೆಯವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು ಮತ್ತು ಹಲವಾರು ವೈದ್ಯರನ್ನು ಸಂಪರ್ಕಿಸಿದರೂ ಯಾವುದೇ ಪರಿಹಾರ ಸಿಗಲಿಲ್ಲ. ಆಗ ರಾಜಾ ಬಾಬು ಸ್ವತಃ ಚಿಕಿತ್ಸೆ ಪಡೆಯಲು ನಿರ್ಧರಿಸಿದರು.

ಆದರೆ, ಅವರ ಸ್ಥಿತಿ ಹದಗೆಟ್ಟಂತೆ, ಹೆಚ್ಚಿನ ಚಿಕಿತ್ಸೆಗಾಗಿ ರಾಜಾ ಬಾಬು ಅವರನ್ನು ಆಗ್ರಾದ ಎಸ್‌ಎನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

 

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

2 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

2 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

3 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

5 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

6 days ago