ಜನ ಮನದ ನಾಡಿ ಮಿಡಿತ

Advertisement

ಶತ್ರುಸಂಹಾರ ಯಾಗ ನಡೆಸಿದ ದರ್ಶನ್

ಮಂಗಳೂರು: ಶತ್ರು ಸಂಹಾರ ಪೂಜೆಗೆ ಹೆಸರಾಗಿರುವ ಕೇರಳ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀಭಗವತಿ ದೇವಸ್ಥಾನಕ್ಕೆ ಶನಿವಾರ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀತ್ ಸಮೇತ ಭೇಟಿ ನೀಡಿ ಶತ್ರುಸಂಹಾರ ಯಾಗ ನಡೆಸಿದರು.

ಶನಿವಾರ ಬೆಳಗ್ಗೆ ಸಂಗಡಿಗರ ಜೊತೆ ಎರಡು ಕಾರಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದ ದರ್ಶನ್ ಅವರು ಸಂಕಲ್ಪ ಕೈಗೊಂಡು ಶತ್ರು ಸಂಹಾರ ಯಾಗದಲ್ಲಿ ಪಾಲ್ಗೊಂಡರು.
ಸಾಂಪ್ರದಾಯಿಕ ದಿರಿಸಿನಲ್ಲಿ ದೇವಸ್ಥಾನ ಪ್ರವೇಶಿಸಿದ ದರ್ಶನ್, ಕುಟುಂಬ ಮಧ್ಯಾಹ್ನ ವರೆಗೆ ಶತ್ರು ಸಂಹಾರ ಪೂಜೆ(ಯಾಗ) ನೆರವೇರಿಸಿತು. ಮಹಾಪೂಜೆ ವೇಳೆ ಸಂಕಲ್ಪ ಮಾಡಿ ನಂತರ
ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಅರ್ಚಕರು ದರ್ಶನ್, ಕುಟುಂಬಕ್ಕೆ ಕಪ್ಪು ಬಣ್ಣದ ತಾಯತ ನೀಡಿದ್ದು, ಅದನ್ನು ಧರಿಸಿದರೆ ಸ್ವರಕ್ಷಣೆ ಸಿಗುತ್ತದೆ ಎಂಬ ನಂಬಿಕೆ ಇದೆ. ಇದಲ್ಲದೆ ದೃಷ್ಟಿ ನಿವಾರಣೆಗೆ ಅಘ ಹೆಸರಿನ ಪೂಜೆಯನ್ನೂ ದರ್ಶನ್ ನೆರವೇರಿಸಿದರು.
ಮಹಾಪೂಜೆ ವೇಳೆ ದರ್ಶನ್ ಮನಸ್ಸಿನಲ್ಲೇ ದೀರ್ಘ ಹೊತ್ತು ಪ್ರಾರ್ಥನೆ ಸಲ್ಲಿಸಿದರು. ಏನಾದರೂ ಸಮಸ್ಯೆಯಾಗಿದ್ದರೆ, ಅದನ್ನು ಮನಸ್ಸಿನಲ್ಲೇ ಹೇಳಿ ಪ್ರಾರ್ಥಿಸುವುದು ಇಲ್ಲಿನ ಕ್ರಮ. ಮಾಟ, ಮಂತ್ರ, ಶತ್ರುಬಾಧೆ ನಿವಾರಣೆಗೆ ಈ ಕ್ಷೇತ್ರ ಪ್ರಾಮುಖ್ಯತೆ ಹೊಂದಿದೆ. ಯಾರ ವಿರುದ್ಧ ಅಥವಾ ಯಾರದೇ ವೈಯಕ್ತಿಕ ಹೆಸರೆತ್ತಿ ಇಲ್ಲಿ ಶತ್ರು ಸಂಹಾರ ಯಾಗ
ನಡೆಸುವುದಿಲ್ಲ. ಕೇವಲ ಮಾಟ, ಮಂತ್ರ, ಶತ್ರುಬಾಧೆ ನಿವಾರಣೆಗೆ ಮಾತ್ರ ಇಲ್ಲಿ ಯಾಗ ನಡೆಸಲಾಗುತ್ತದೆ. ಈ ದೇವಸ್ಧಾನಕ್ಕೆ ದರ್ಶನ್ ಆಗಮಿಸಿ ಸೇವೆ ಸಲ್ಲಿಸಿರುವ ಹಿಂದೆ ಅವರಿಗೆ ಮಾಟ, ಮಂತ್ರ, ಶತ್ರುಬಾಧೆಯ ಸಾಧ್ಯತೆಯನ್ನು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!