ಜನ ಮನದ ನಾಡಿ ಮಿಡಿತ

Advertisement

ಶತ್ರುಸಂಹಾರ ಯಾಗ ನಡೆಸಿದ ದರ್ಶನ್

ಮಂಗಳೂರು: ಶತ್ರು ಸಂಹಾರ ಪೂಜೆಗೆ ಹೆಸರಾಗಿರುವ ಕೇರಳ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀಭಗವತಿ ದೇವಸ್ಥಾನಕ್ಕೆ ಶನಿವಾರ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀತ್ ಸಮೇತ ಭೇಟಿ ನೀಡಿ ಶತ್ರುಸಂಹಾರ ಯಾಗ ನಡೆಸಿದರು.

ಶನಿವಾರ ಬೆಳಗ್ಗೆ ಸಂಗಡಿಗರ ಜೊತೆ ಎರಡು ಕಾರಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದ ದರ್ಶನ್ ಅವರು ಸಂಕಲ್ಪ ಕೈಗೊಂಡು ಶತ್ರು ಸಂಹಾರ ಯಾಗದಲ್ಲಿ ಪಾಲ್ಗೊಂಡರು.
ಸಾಂಪ್ರದಾಯಿಕ ದಿರಿಸಿನಲ್ಲಿ ದೇವಸ್ಥಾನ ಪ್ರವೇಶಿಸಿದ ದರ್ಶನ್, ಕುಟುಂಬ ಮಧ್ಯಾಹ್ನ ವರೆಗೆ ಶತ್ರು ಸಂಹಾರ ಪೂಜೆ(ಯಾಗ) ನೆರವೇರಿಸಿತು. ಮಹಾಪೂಜೆ ವೇಳೆ ಸಂಕಲ್ಪ ಮಾಡಿ ನಂತರ
ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಅರ್ಚಕರು ದರ್ಶನ್, ಕುಟುಂಬಕ್ಕೆ ಕಪ್ಪು ಬಣ್ಣದ ತಾಯತ ನೀಡಿದ್ದು, ಅದನ್ನು ಧರಿಸಿದರೆ ಸ್ವರಕ್ಷಣೆ ಸಿಗುತ್ತದೆ ಎಂಬ ನಂಬಿಕೆ ಇದೆ. ಇದಲ್ಲದೆ ದೃಷ್ಟಿ ನಿವಾರಣೆಗೆ ಅಘ ಹೆಸರಿನ ಪೂಜೆಯನ್ನೂ ದರ್ಶನ್ ನೆರವೇರಿಸಿದರು.
ಮಹಾಪೂಜೆ ವೇಳೆ ದರ್ಶನ್ ಮನಸ್ಸಿನಲ್ಲೇ ದೀರ್ಘ ಹೊತ್ತು ಪ್ರಾರ್ಥನೆ ಸಲ್ಲಿಸಿದರು. ಏನಾದರೂ ಸಮಸ್ಯೆಯಾಗಿದ್ದರೆ, ಅದನ್ನು ಮನಸ್ಸಿನಲ್ಲೇ ಹೇಳಿ ಪ್ರಾರ್ಥಿಸುವುದು ಇಲ್ಲಿನ ಕ್ರಮ. ಮಾಟ, ಮಂತ್ರ, ಶತ್ರುಬಾಧೆ ನಿವಾರಣೆಗೆ ಈ ಕ್ಷೇತ್ರ ಪ್ರಾಮುಖ್ಯತೆ ಹೊಂದಿದೆ. ಯಾರ ವಿರುದ್ಧ ಅಥವಾ ಯಾರದೇ ವೈಯಕ್ತಿಕ ಹೆಸರೆತ್ತಿ ಇಲ್ಲಿ ಶತ್ರು ಸಂಹಾರ ಯಾಗ
ನಡೆಸುವುದಿಲ್ಲ. ಕೇವಲ ಮಾಟ, ಮಂತ್ರ, ಶತ್ರುಬಾಧೆ ನಿವಾರಣೆಗೆ ಮಾತ್ರ ಇಲ್ಲಿ ಯಾಗ ನಡೆಸಲಾಗುತ್ತದೆ. ಈ ದೇವಸ್ಧಾನಕ್ಕೆ ದರ್ಶನ್ ಆಗಮಿಸಿ ಸೇವೆ ಸಲ್ಲಿಸಿರುವ ಹಿಂದೆ ಅವರಿಗೆ ಮಾಟ, ಮಂತ್ರ, ಶತ್ರುಬಾಧೆಯ ಸಾಧ್ಯತೆಯನ್ನು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!