ಮಂಗಳೂರು: ಶತ್ರು ಸಂಹಾರ ಪೂಜೆಗೆ ಹೆಸರಾಗಿರುವ ಕೇರಳ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀಭಗವತಿ ದೇವಸ್ಥಾನಕ್ಕೆ ಶನಿವಾರ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀತ್ ಸಮೇತ ಭೇಟಿ ನೀಡಿ ಶತ್ರುಸಂಹಾರ ಯಾಗ ನಡೆಸಿದರು.
ಶನಿವಾರ ಬೆಳಗ್ಗೆ ಸಂಗಡಿಗರ ಜೊತೆ ಎರಡು ಕಾರಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದ ದರ್ಶನ್ ಅವರು ಸಂಕಲ್ಪ ಕೈಗೊಂಡು ಶತ್ರು ಸಂಹಾರ ಯಾಗದಲ್ಲಿ ಪಾಲ್ಗೊಂಡರು.
ಸಾಂಪ್ರದಾಯಿಕ ದಿರಿಸಿನಲ್ಲಿ ದೇವಸ್ಥಾನ ಪ್ರವೇಶಿಸಿದ ದರ್ಶನ್, ಕುಟುಂಬ ಮಧ್ಯಾಹ್ನ ವರೆಗೆ ಶತ್ರು ಸಂಹಾರ ಪೂಜೆ(ಯಾಗ) ನೆರವೇರಿಸಿತು. ಮಹಾಪೂಜೆ ವೇಳೆ ಸಂಕಲ್ಪ ಮಾಡಿ ನಂತರ
ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಅರ್ಚಕರು ದರ್ಶನ್, ಕುಟುಂಬಕ್ಕೆ ಕಪ್ಪು ಬಣ್ಣದ ತಾಯತ ನೀಡಿದ್ದು, ಅದನ್ನು ಧರಿಸಿದರೆ ಸ್ವರಕ್ಷಣೆ ಸಿಗುತ್ತದೆ ಎಂಬ ನಂಬಿಕೆ ಇದೆ. ಇದಲ್ಲದೆ ದೃಷ್ಟಿ ನಿವಾರಣೆಗೆ ಅಘ ಹೆಸರಿನ ಪೂಜೆಯನ್ನೂ ದರ್ಶನ್ ನೆರವೇರಿಸಿದರು.
ಮಹಾಪೂಜೆ ವೇಳೆ ದರ್ಶನ್ ಮನಸ್ಸಿನಲ್ಲೇ ದೀರ್ಘ ಹೊತ್ತು ಪ್ರಾರ್ಥನೆ ಸಲ್ಲಿಸಿದರು. ಏನಾದರೂ ಸಮಸ್ಯೆಯಾಗಿದ್ದರೆ, ಅದನ್ನು ಮನಸ್ಸಿನಲ್ಲೇ ಹೇಳಿ ಪ್ರಾರ್ಥಿಸುವುದು ಇಲ್ಲಿನ ಕ್ರಮ. ಮಾಟ, ಮಂತ್ರ, ಶತ್ರುಬಾಧೆ ನಿವಾರಣೆಗೆ ಈ ಕ್ಷೇತ್ರ ಪ್ರಾಮುಖ್ಯತೆ ಹೊಂದಿದೆ. ಯಾರ ವಿರುದ್ಧ ಅಥವಾ ಯಾರದೇ ವೈಯಕ್ತಿಕ ಹೆಸರೆತ್ತಿ ಇಲ್ಲಿ ಶತ್ರು ಸಂಹಾರ ಯಾಗ
ನಡೆಸುವುದಿಲ್ಲ. ಕೇವಲ ಮಾಟ, ಮಂತ್ರ, ಶತ್ರುಬಾಧೆ ನಿವಾರಣೆಗೆ ಮಾತ್ರ ಇಲ್ಲಿ ಯಾಗ ನಡೆಸಲಾಗುತ್ತದೆ. ಈ ದೇವಸ್ಧಾನಕ್ಕೆ ದರ್ಶನ್ ಆಗಮಿಸಿ ಸೇವೆ ಸಲ್ಲಿಸಿರುವ ಹಿಂದೆ ಅವರಿಗೆ ಮಾಟ, ಮಂತ್ರ, ಶತ್ರುಬಾಧೆಯ ಸಾಧ್ಯತೆಯನ್ನು ಹೇಳಲಾಗುತ್ತಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…