ಮಂಗಳೂರು: ಶತ್ರು ಸಂಹಾರ ಪೂಜೆಗೆ ಹೆಸರಾಗಿರುವ ಕೇರಳ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀಭಗವತಿ ದೇವಸ್ಥಾನಕ್ಕೆ ಶನಿವಾರ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀತ್ ಸಮೇತ ಭೇಟಿ ನೀಡಿ ಶತ್ರುಸಂಹಾರ ಯಾಗ ನಡೆಸಿದರು.
ಶನಿವಾರ ಬೆಳಗ್ಗೆ ಸಂಗಡಿಗರ ಜೊತೆ ಎರಡು ಕಾರಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದ ದರ್ಶನ್ ಅವರು ಸಂಕಲ್ಪ ಕೈಗೊಂಡು ಶತ್ರು ಸಂಹಾರ ಯಾಗದಲ್ಲಿ ಪಾಲ್ಗೊಂಡರು.
ಸಾಂಪ್ರದಾಯಿಕ ದಿರಿಸಿನಲ್ಲಿ ದೇವಸ್ಥಾನ ಪ್ರವೇಶಿಸಿದ ದರ್ಶನ್, ಕುಟುಂಬ ಮಧ್ಯಾಹ್ನ ವರೆಗೆ ಶತ್ರು ಸಂಹಾರ ಪೂಜೆ(ಯಾಗ) ನೆರವೇರಿಸಿತು. ಮಹಾಪೂಜೆ ವೇಳೆ ಸಂಕಲ್ಪ ಮಾಡಿ ನಂತರ
ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಅರ್ಚಕರು ದರ್ಶನ್, ಕುಟುಂಬಕ್ಕೆ ಕಪ್ಪು ಬಣ್ಣದ ತಾಯತ ನೀಡಿದ್ದು, ಅದನ್ನು ಧರಿಸಿದರೆ ಸ್ವರಕ್ಷಣೆ ಸಿಗುತ್ತದೆ ಎಂಬ ನಂಬಿಕೆ ಇದೆ. ಇದಲ್ಲದೆ ದೃಷ್ಟಿ ನಿವಾರಣೆಗೆ ಅಘ ಹೆಸರಿನ ಪೂಜೆಯನ್ನೂ ದರ್ಶನ್ ನೆರವೇರಿಸಿದರು.
ಮಹಾಪೂಜೆ ವೇಳೆ ದರ್ಶನ್ ಮನಸ್ಸಿನಲ್ಲೇ ದೀರ್ಘ ಹೊತ್ತು ಪ್ರಾರ್ಥನೆ ಸಲ್ಲಿಸಿದರು. ಏನಾದರೂ ಸಮಸ್ಯೆಯಾಗಿದ್ದರೆ, ಅದನ್ನು ಮನಸ್ಸಿನಲ್ಲೇ ಹೇಳಿ ಪ್ರಾರ್ಥಿಸುವುದು ಇಲ್ಲಿನ ಕ್ರಮ. ಮಾಟ, ಮಂತ್ರ, ಶತ್ರುಬಾಧೆ ನಿವಾರಣೆಗೆ ಈ ಕ್ಷೇತ್ರ ಪ್ರಾಮುಖ್ಯತೆ ಹೊಂದಿದೆ. ಯಾರ ವಿರುದ್ಧ ಅಥವಾ ಯಾರದೇ ವೈಯಕ್ತಿಕ ಹೆಸರೆತ್ತಿ ಇಲ್ಲಿ ಶತ್ರು ಸಂಹಾರ ಯಾಗ
ನಡೆಸುವುದಿಲ್ಲ. ಕೇವಲ ಮಾಟ, ಮಂತ್ರ, ಶತ್ರುಬಾಧೆ ನಿವಾರಣೆಗೆ ಮಾತ್ರ ಇಲ್ಲಿ ಯಾಗ ನಡೆಸಲಾಗುತ್ತದೆ. ಈ ದೇವಸ್ಧಾನಕ್ಕೆ ದರ್ಶನ್ ಆಗಮಿಸಿ ಸೇವೆ ಸಲ್ಲಿಸಿರುವ ಹಿಂದೆ ಅವರಿಗೆ ಮಾಟ, ಮಂತ್ರ, ಶತ್ರುಬಾಧೆಯ ಸಾಧ್ಯತೆಯನ್ನು ಹೇಳಲಾಗುತ್ತಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…