ಮಂಗಳೂರು: ವೃತ್ತಪತ್ರಿಕೆ ವಿತರಕರೊಬ್ಬರು ದುಬಾರಿ ಮೊಬೈಲ್ ಫೋನ್ ಅನ್ನು ಅದರ ಮಾಲಕರಿಗೆ ಹಿಂದಿರುಗಿಸಿದ್ದಾರೆ. ಅವರ ಈ ಪ್ರಾಮಾಣಿಕತೆಯ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಜೋಯಲ್ ಅವರು, ಸುಮಾರು ೧.೨೫ ಲಕ್ಷ ರೂಪಾಯಿ ಮೌಲ್ಯದ ತನ್ನ ಐಫೋನ್ ಕಳೆದುಕೊಂಡಿದ್ದರು. ಅವರ ಈ ಫೋನ್ ಮಂಗಳೂರಿನ ರೇಣುಕಾರಾಜ್ ನ್ಯೂಸ್ ಏಜೆನ್ಸಿಯಲ್ಲಿ ಕೆಲಸ ಮಾಡುವ ವೃತ್ತಪತ್ರಿಕೆ ವಿತರಕ ರಮೇಶ್ ಅವರಿಗೆ ಸಿಕ್ಕಿತ್ತು.
ಆದರೆ ರಮೇಶ್ ಅವರು ಈ ಫೋನ್ ಇಟ್ಟುಕೊಳ್ಳದೇ ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಇದರಿಂದಾಗಿ ಫೋನ್ನ ನಿಜವಾದ ಮಾಲಕರನ್ನು ಪತ್ತೆಹಚ್ಚಲು ಸಹಾಯವಾಯಿತು. ಈ ಫೋನ್ ಅನ್ನು ಜೋಯಲ್ ಅವರದ್ದೇ ಎಂದು ಖಚಿತಪಡಿಸಿಕೊಂಡ ರಮೇಶ್ ಅವರು ತಕ್ಷಣವೇ ಅವರಿಗೆ ಹಸ್ತಾಂತರಿಸಿದ್ದಾರೆ. ರಮೇಶ್ ಅವರು ಪ್ರಾಮಾಣಿಕತೆಗಾಗಿ ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…