ಕರಾವಳಿ

ನಿಯಮ ರೂಪಿಸುವವರಿಗೆ ನಿಯಮದ ಪಾಠ ಮಾಡಿದ ಸಾಮಾನ್ಯ ಜನ; ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ನಡೆದ ಘಟನೆ

ಪುತ್ತೂರು: ಸಾಮಾನ್ಯ ಜನ ಒಂದು ಮನೆ, ಮಳಿಗೆ ಕಟ್ಟಲು ಮುಂದಾದಲ್ಲಿ, ಸರಕಾರಕ್ಕೆ ಸಂಬಂಧಪಟ್ಟ ಇಲಾಖೆಗಳು ಹಲವು ಕಾನೂನು, ನಿಯಮಗಳನ್ನು ಆತನ ಮುಂದೆ ಇಡುತ್ತೆ. ಆದರೆ ಸರಕಾರದ ಆಡಳಿತ ವ್ಯವಸ್ಥೆ ರಸ್ತೆಯೋ, ಚರಂಡಿಯೋ ಮಾಡುವ ಸಂದರ್ಭದಲ್ಲಿ ತಾನು ರೂಪಿಸಿದ ಕಾನೂನನ್ನೇ ಮುರಿಯೋದು ಸಾಮಾನ್ಯ. ಇಂಥಹುದೇ ಒಂದು ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ನಡೆದಿದ್ದು, ನಾಗರಿಕರೇ ಇದೀಗ ನಗರಸಭೆ ಅಧಿಕಾರಿಗಳಿಗೆ ಕಾನೂನು ಪಾಲಿಸಿ ಕಾಮಗಾರಿ ನಡೆಸುವಂತೆ ಒತ್ತಡ ಹೇರಲಾರಂಭಿಸಿದ್ದಾರೆ. ಕಾಮಗಾರಿ ನಡೆದ ಬಳಿಕ ಕಳಪೆ, ಉಪಯೋಗಕ್ಕಿಲ್ಲದ್ದು ಎನ್ನುವ ಬದಲು ಕಾಮಗಾರಿ ಆರಂಭದ ಮೊದಲೇ ಇಲ್ಲಿನ ಜನ ಎಚ್ಚೆತ್ತುಕೊಂಡಿದ್ದಾರೆ.

ಸಾಮಾನ್ಯ ವ್ಯಕ್ತಿಯೋರ್ವನಿಗೆ ಸರಕಾರದ ಎಲ್ಲಾ ನಿಯಮ-ಕಾನೂನು ಅನ್ವಯವಾಗುವಂತೆ, ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಆಡಳಿತ ವ್ಯವಸ್ಥೆಗಳು ಯಾವ ರೀತಿಯಲ್ಲಿ ತಾವೇ ಸಿದ್ಧಪಡಿಸಿದ ನಿಯಮಗಳನ್ನು ಎಷ್ಟರ ಮಟ್ಟಿಗೆ ಪಾಲಿಸುತ್ತಾರೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ. ಯಾವಾಗ ಸಾರ್ವಜನಿಕರೇ ಸರಕಾರಿ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಲು ಆರಂಭಿಸುತ್ತಾರೋ, ಅಂದು ಜನತೆಗೆ ಗುಣಮಟ್ಟದ, ನಿಯಮಗಳಿಗನುಸಾರವಾದ ಮೂಲಭೂತ ಸೌಲಭ್ಯಗಳು ಸಿಗುತ್ತೆ. ಇಂತಹುದೇ ಒಂದು ಪ್ರಯತ್ನಕ್ಕೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಗರಸಭಾ ವ್ಯಾಪ್ತಿಯ ಕೆರೆಮೂಲೆ ಎನ್ನುವ ಪ್ರದೇಶದ ನಿವಾಸಿಗಳು ಮುಂದಾಗಿದ್ದಾರೆ. ಕೆರೆಮೂಲೆಯಿಂದ ಕೇಪುಳು ಮೂಲಕ ಪುತ್ತೂರು-ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸುವ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಲು ಪುತ್ತೂರು ನಗರಸಭೆ ಸಿದ್ಧತೆಯನ್ನು ನಡೆಸಿದೆ. ನಗರಸಭೆ ನಿಯಮದ ಪ್ರಕಾರ ರಸ್ತೆ 7 ಮೀಟರ್ ಅಗಲ, ಬಳಿಕ ಎರಡೂ ಕಡೆಗಳಲ್ಲಿ ಚರಂಡಿ ವ್ಯವಸ್ಥೆ ಇರಬೇಕು ಎಂದಿದ್ದರೂ, ನೂತನವಾಗಿ ಆರಂಭಿಸಿದ ಈ ರಸ್ತೆಯನ್ನು ಚರಂಡಿ ಸೇರಿದಂತೆ ಕೇವಲ 6 ಮೀಟರ್ ಅಗಲದಲ್ಲಿ ಮಾಡಲಾಗುತ್ತಿದೆ. 7 ಮೀಟರ್ ಅಗಲದ ರಸ್ತೆ ಮಾಡಲು ಈ ಭಾಗದಲ್ಲಿ ಜಾಗದ ಸಮಸ್ಯೆಯೂ ಇಲ್ಲ. ಕೇವಲ ರಸ್ತೆ ಬದಿಯಿರುವ ಸರಕಾರಿ ಜಾಗವನ್ನು ಒತ್ತುವರಿ ಮಾಡಿರುವುದನ್ನು ಬಳಸಿಕೊಂಡರೆ ಸಾಧ್ಯವಿಲ್ಲದ ಕೆಲಸವೂ ಅಲ್ಲ. ಆದರೆ ನಗರಸಭೆ ಸಿಕ್ಕ ಜಾಗದಲ್ಲಿ ಜಾಗದಲ್ಲಿ ಚರಂಡಿ, ರಸ್ತೆ ಮಾಡಿ ತನ್ನ ಕೈತೊಳೆದುಕೊಳ್ಳಲು ಮುಂದಾಗಿದೆ. ಆದರೆ ಈ ಭಾಗದ ಜನ ಮಾತ್ರ ನಗರಸಭೆಯ ಈ ನಿಯಮ ಉಲ್ಲಂಘಿಸಿ ನಡೆಸುವ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ಕಾನೂನಿನ ಪಾಢ ಹೇಳಲು ಮುಂದಾಗಿದ್ದಾರೆ.

ಸ್ಥಳೀಯರ ವಿರೋಧವನ್ನು ಮನಗಂಡ ಕಾಮಗಾರಿ ವಹಿಸಿಕೊಂಡ ಗುತ್ತಿಗೆದಾರ ರಾತ್ರೋರಾತ್ರಿ ರಸ್ತೆ ಪಕ್ಕದ ಚರಂಡಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾನೆ. ಸ್ಥಳೀಯರು ಬೆಳಗ್ಗೆ ಎದ್ದು ನಖಡುವ ಸಂದರ್ಭದಲ್ಲಿ ಸುಮಾರು 25 ಮೀಟರ್ ನಷ್ಟು ಉದ್ದದ ಚರಂಡಿ ಕೆಲಸವನ್ನೂ ಮಾಡಿ ಮುಗಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಪುತ್ತೂರು ನಗರಸಭೆ ಕಮಿಷನರ್ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳಿಗೆ ತಮ್ಮ ಆಕ್ಷೇಪವನ್ನು ಲಿಖಿತವಾಗಿ ನೀಡಿದ್ದಾರೆ. ಆಕ್ಷೇಪದ ಮೇಲೆಯೂ ಕಾಮಗಾರಿ ನಿರ್ವಹಿಸಿದಲ್ಲಿ ಅಧಿಕಾರಿಗಳು,ಗುತ್ತಿಗೆದಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಲೋಕಾಯುಕ್ತ ಮತ್ತು ನ್ಯಾಯಾಲಯದ ಮೊರೆ ಹೋಗುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಈ ಹಿಂದೆ ಇದೇ ಪರಿಸರದಲ್ಲಿ ನಗರಸಭಾ ನಿಯಮ ಉಲ್ಲಂಘಿಸಿ ರಸ್ತೆ ಕಾಮಗಾರಿಗಳನ್ನು ನಡೆಸಿದ ಪರಿಣಾಮವನ್ನು ಈ ಭಾಗದ ಜನ ಇಂದು ಅನುಭವಿಸುವಂತಾಗಿದ್ದು, ಮುಂದೆ ಇಂತಹ ಕಣ್ಣೊರೆಸುವ ಪ್ರಯತ್ನಗಳಿಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

9 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

9 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

10 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

1 day ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

1 day ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

1 day ago