ಕರಾವಳಿ

ನಿಯಮ ರೂಪಿಸುವವರಿಗೆ ನಿಯಮದ ಪಾಠ ಮಾಡಿದ ಸಾಮಾನ್ಯ ಜನ; ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ನಡೆದ ಘಟನೆ

ಪುತ್ತೂರು: ಸಾಮಾನ್ಯ ಜನ ಒಂದು ಮನೆ, ಮಳಿಗೆ ಕಟ್ಟಲು ಮುಂದಾದಲ್ಲಿ, ಸರಕಾರಕ್ಕೆ ಸಂಬಂಧಪಟ್ಟ ಇಲಾಖೆಗಳು ಹಲವು ಕಾನೂನು, ನಿಯಮಗಳನ್ನು ಆತನ ಮುಂದೆ ಇಡುತ್ತೆ. ಆದರೆ ಸರಕಾರದ ಆಡಳಿತ ವ್ಯವಸ್ಥೆ ರಸ್ತೆಯೋ, ಚರಂಡಿಯೋ ಮಾಡುವ ಸಂದರ್ಭದಲ್ಲಿ ತಾನು ರೂಪಿಸಿದ ಕಾನೂನನ್ನೇ ಮುರಿಯೋದು ಸಾಮಾನ್ಯ. ಇಂಥಹುದೇ ಒಂದು ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ನಡೆದಿದ್ದು, ನಾಗರಿಕರೇ ಇದೀಗ ನಗರಸಭೆ ಅಧಿಕಾರಿಗಳಿಗೆ ಕಾನೂನು ಪಾಲಿಸಿ ಕಾಮಗಾರಿ ನಡೆಸುವಂತೆ ಒತ್ತಡ ಹೇರಲಾರಂಭಿಸಿದ್ದಾರೆ. ಕಾಮಗಾರಿ ನಡೆದ ಬಳಿಕ ಕಳಪೆ, ಉಪಯೋಗಕ್ಕಿಲ್ಲದ್ದು ಎನ್ನುವ ಬದಲು ಕಾಮಗಾರಿ ಆರಂಭದ ಮೊದಲೇ ಇಲ್ಲಿನ ಜನ ಎಚ್ಚೆತ್ತುಕೊಂಡಿದ್ದಾರೆ.

ಸಾಮಾನ್ಯ ವ್ಯಕ್ತಿಯೋರ್ವನಿಗೆ ಸರಕಾರದ ಎಲ್ಲಾ ನಿಯಮ-ಕಾನೂನು ಅನ್ವಯವಾಗುವಂತೆ, ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಆಡಳಿತ ವ್ಯವಸ್ಥೆಗಳು ಯಾವ ರೀತಿಯಲ್ಲಿ ತಾವೇ ಸಿದ್ಧಪಡಿಸಿದ ನಿಯಮಗಳನ್ನು ಎಷ್ಟರ ಮಟ್ಟಿಗೆ ಪಾಲಿಸುತ್ತಾರೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ. ಯಾವಾಗ ಸಾರ್ವಜನಿಕರೇ ಸರಕಾರಿ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಲು ಆರಂಭಿಸುತ್ತಾರೋ, ಅಂದು ಜನತೆಗೆ ಗುಣಮಟ್ಟದ, ನಿಯಮಗಳಿಗನುಸಾರವಾದ ಮೂಲಭೂತ ಸೌಲಭ್ಯಗಳು ಸಿಗುತ್ತೆ. ಇಂತಹುದೇ ಒಂದು ಪ್ರಯತ್ನಕ್ಕೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಗರಸಭಾ ವ್ಯಾಪ್ತಿಯ ಕೆರೆಮೂಲೆ ಎನ್ನುವ ಪ್ರದೇಶದ ನಿವಾಸಿಗಳು ಮುಂದಾಗಿದ್ದಾರೆ. ಕೆರೆಮೂಲೆಯಿಂದ ಕೇಪುಳು ಮೂಲಕ ಪುತ್ತೂರು-ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸುವ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಲು ಪುತ್ತೂರು ನಗರಸಭೆ ಸಿದ್ಧತೆಯನ್ನು ನಡೆಸಿದೆ. ನಗರಸಭೆ ನಿಯಮದ ಪ್ರಕಾರ ರಸ್ತೆ 7 ಮೀಟರ್ ಅಗಲ, ಬಳಿಕ ಎರಡೂ ಕಡೆಗಳಲ್ಲಿ ಚರಂಡಿ ವ್ಯವಸ್ಥೆ ಇರಬೇಕು ಎಂದಿದ್ದರೂ, ನೂತನವಾಗಿ ಆರಂಭಿಸಿದ ಈ ರಸ್ತೆಯನ್ನು ಚರಂಡಿ ಸೇರಿದಂತೆ ಕೇವಲ 6 ಮೀಟರ್ ಅಗಲದಲ್ಲಿ ಮಾಡಲಾಗುತ್ತಿದೆ. 7 ಮೀಟರ್ ಅಗಲದ ರಸ್ತೆ ಮಾಡಲು ಈ ಭಾಗದಲ್ಲಿ ಜಾಗದ ಸಮಸ್ಯೆಯೂ ಇಲ್ಲ. ಕೇವಲ ರಸ್ತೆ ಬದಿಯಿರುವ ಸರಕಾರಿ ಜಾಗವನ್ನು ಒತ್ತುವರಿ ಮಾಡಿರುವುದನ್ನು ಬಳಸಿಕೊಂಡರೆ ಸಾಧ್ಯವಿಲ್ಲದ ಕೆಲಸವೂ ಅಲ್ಲ. ಆದರೆ ನಗರಸಭೆ ಸಿಕ್ಕ ಜಾಗದಲ್ಲಿ ಜಾಗದಲ್ಲಿ ಚರಂಡಿ, ರಸ್ತೆ ಮಾಡಿ ತನ್ನ ಕೈತೊಳೆದುಕೊಳ್ಳಲು ಮುಂದಾಗಿದೆ. ಆದರೆ ಈ ಭಾಗದ ಜನ ಮಾತ್ರ ನಗರಸಭೆಯ ಈ ನಿಯಮ ಉಲ್ಲಂಘಿಸಿ ನಡೆಸುವ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ಕಾನೂನಿನ ಪಾಢ ಹೇಳಲು ಮುಂದಾಗಿದ್ದಾರೆ.

ಸ್ಥಳೀಯರ ವಿರೋಧವನ್ನು ಮನಗಂಡ ಕಾಮಗಾರಿ ವಹಿಸಿಕೊಂಡ ಗುತ್ತಿಗೆದಾರ ರಾತ್ರೋರಾತ್ರಿ ರಸ್ತೆ ಪಕ್ಕದ ಚರಂಡಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾನೆ. ಸ್ಥಳೀಯರು ಬೆಳಗ್ಗೆ ಎದ್ದು ನಖಡುವ ಸಂದರ್ಭದಲ್ಲಿ ಸುಮಾರು 25 ಮೀಟರ್ ನಷ್ಟು ಉದ್ದದ ಚರಂಡಿ ಕೆಲಸವನ್ನೂ ಮಾಡಿ ಮುಗಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಪುತ್ತೂರು ನಗರಸಭೆ ಕಮಿಷನರ್ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳಿಗೆ ತಮ್ಮ ಆಕ್ಷೇಪವನ್ನು ಲಿಖಿತವಾಗಿ ನೀಡಿದ್ದಾರೆ. ಆಕ್ಷೇಪದ ಮೇಲೆಯೂ ಕಾಮಗಾರಿ ನಿರ್ವಹಿಸಿದಲ್ಲಿ ಅಧಿಕಾರಿಗಳು,ಗುತ್ತಿಗೆದಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಲೋಕಾಯುಕ್ತ ಮತ್ತು ನ್ಯಾಯಾಲಯದ ಮೊರೆ ಹೋಗುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಈ ಹಿಂದೆ ಇದೇ ಪರಿಸರದಲ್ಲಿ ನಗರಸಭಾ ನಿಯಮ ಉಲ್ಲಂಘಿಸಿ ರಸ್ತೆ ಕಾಮಗಾರಿಗಳನ್ನು ನಡೆಸಿದ ಪರಿಣಾಮವನ್ನು ಈ ಭಾಗದ ಜನ ಇಂದು ಅನುಭವಿಸುವಂತಾಗಿದ್ದು, ಮುಂದೆ ಇಂತಹ ಕಣ್ಣೊರೆಸುವ ಪ್ರಯತ್ನಗಳಿಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

11 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

11 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

11 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

16 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

16 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago