ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಸನ್ನಿಧಿಯಲ್ಲಿ ಅಷ್ಟಬಂಧ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಅಂಗವಾಗಿ ಶ್ರೀ ಕದ್ರಿ ಮಂಜುನಾಥೇಶ್ವರ ದೇವಾಲಯದ ಆವರಣ ದಿಂದ ಮದೂರು ದೇವಾಲಯಕ್ಕೆ ಮ್ಯಾರಥಾನ್ ಓಟ ನಡೆಯಿತು.
ಮ್ಯಾರಥಾನ್ ಓಟವನ್ನು ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಉದ್ಘಾಟಿಸಿದರು. ಉದ್ಘಾಟಕರು ಮಾತಾಡಿ ಯುವ ಮನಸುಗಳು ಇಂದು ಹಾದಿ ತಪ್ಪುತ್ತಿದೆ. ಈ ಸಂದರ್ಭದಲ್ಲಿ ಇಂತಹ ಯುವಕರ ದೇವಾಲಯದ ಕಡೆಗಿನ ಮ್ಯಾರಥಾನ್ ಓಟವು ಇತರ ಯುವಕರಿಗೂ ಪ್ರೇರಣೆ ನೀಡುವಂತದ್ದು. ಇದು ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು. ಇನ್ನು ಮಧುರು ಸಿದ್ಧಿವಿನಾಯಕ ದೇವಸ್ಥಾನದ ಟ್ರಸ್ಟ್ ಸದಸ್ಯರ ಮಾತನಾಡಿ ದಕ್ಷಿಣ ಕನ್ನಡಕ್ಕೂ ಕಾಸರಗೋಡಿಗೂ ಅವಿನಾಭಾವ ಸಂಬoಧವಿದೆ. ಇಲ್ಲಿನ ಕದ್ರಿ ದೇಗುಲಕ್ಕೆ ಅದರದ್ದೆ ಆದ ಐತಿಹ್ಯ ಇದೆ. ಹಾಗೆ ಇತಿಹಾಸ ಪ್ರಸಿದ್ಧ ಮದ್ದೂರು ದೇವಾಲಯಕ್ಕೆ ಇಲ್ಲಿನಿಂದಲೇ ಪ್ರಚಾರ ಸಿಗಬೇಕೆನ್ನುವುದು ನಮ್ಮೆಲ್ಲರ ಅಭಿಲಾಷೆ ಎಂದರು. ಮ್ಯಾರಥಾನ್ ಓಟಗಾರ ಮಾತಾಡಿ ನಮಗೆ ದೇಶ ಸೇವೆ ಮಾಡಬೇಕೆನ್ನುವ ಆಸೆ ಇದೆ. ಹಾಗಾಗಿ ಊರಿನಲ್ಲಿ ಓಟದ ಸ್ಪರ್ಧೆ ಆಗಾಗ್ಗೆ ಮಾಡುತ್ತಿದ್ದೆವು. ನಮ್ಮ ಹರಕೆ ಈಡೇರಲು ನಮ್ಮ ಮ್ಯಾರಥಾನ್ ದೇವಸ್ಥಾನದ ಕಡೆಗೆ ಸಾಗಲಿದೆ. ಭವಿಷ್ಯತ್ತಿನಲ್ಲಿ ಸೇನೆಗೆ ಸೇರುವ ಅಭಿಲಾಷೆ ಈಡೇರಿಸಲು ಗಣಪನಲ್ಲಿ ಬೇಡುವೆ ಎಂದರು. ಈ ಮ್ಯಾರಥಾನ್ ಉದ್ಘಾಟನೆಯಲ್ಲಿ ಮಧೂರು ದೇವಾಲಯದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…