ಜನ ಮನದ ನಾಡಿ ಮಿಡಿತ

Advertisement

ಕೊಲ್ಲೂರು ದೇವಸ್ಥಾನದಲ್ಲಿ ಶ್ರೀಮನ್ಮಹಾರಥೋತ್ಸವ ಸಂಭ್ರಮ

ಉಡುಪಿ: ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಶನಿವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.

ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ದೇಗುಲದ ಪ್ರಧಾನ ತಂತ್ರಿ ನಿತ್ಯಾನಂದ ಅಡಿಗ ನೇತೃತ್ವದಲ್ಲಿ ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗಿತ್ತು. ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ 12.30 ರ ವೇಳೆಗೆ ಜೋಡಿ ಉತ್ಸವ ಮೂರ್ತಿಗಳನ್ನು ಗರ್ಭಗುಡಿಯಿಂದ ಹೊರತಂದು, ಸುತ್ತ ಪೌಳಿಯಲ್ಲಿ ಮೂರು ಸುತ್ತು ಉತ್ಸವ ನಡೆಸಿ, ಬಳಿಕ ಓಡು ಬಲಿ ಸೇವೆಗಾಗಿ ಸೌಪರ್ಣಿಕ ನದಿ ತೀರಕ್ಕೆ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಯಲ್ಲಿ ಕೊಂಡೊಯ್ಯಲಾಯಿತು.
ಕೊಲ್ಲೂರಿನ ರಥೋತ್ಸವದ ಪರಂಪರೆಯಂತೆ ಗರ್ಭಗುಡಿಯಿಂದ ತರಲಾದ ಜೋಡಿ (ಎರಡು) ಉತ್ಸವ ಮೂರ್ತಿಗಳನ್ನು ಬ್ರಹ್ಮರಥದಲ್ಲಿ ಕುಳ್ಳಿರಿಸಿ ರಥ ಪೂಜೆ ನಡೆಸಿದ ಬಳಿಕ, ಸಾವಿರಾರು ಭಕ್ತರ ಜಯ ಘೋಷದ ನಡುವೆ, ಬೀದಿ ಗಣಪತಿ ದೇವಸ್ಥಾನದವರೆಗೆ ರಥೋತ್ಸವ ನಡೆಸಲಾಯಿತು. ಸಂಜೆ 5 ಗಂಟೆಯ ಬಳಿಕ ಬ್ರಹ್ಮರಥದಲ್ಲಿ ದೇವರನ್ನು ಕುರಿಸಿ ರಥಬೀದಿಯಲ್ಲಿ ಶಂಕರಾಶ್ರಮದವರೆಗೆ ಬ್ರಹ್ಮರಥ ಕೊಂಡೊಯ್ಯಲಾಯಿತು. ವಾರ್ಷಿಕ ಜಾತ್ರೆಯ ತೇರಿನ ವೈಭವಕ್ಕೆ ದೇಶ-ವಿದೇಶದಿಂದ ಬಂದಿದ್ದ ಸಾವಿರಾರು ಭಕ್ತರು ಸಾಕ್ಷಿಯಾದರು.
ಸಂಜೆ ನಡೆದ ವೈಭವದ ರಥೋತ್ಸವದಲ್ಲಿ ಚೆಂಡೆ ವಾದನ, ತಟ್ಟಿರಾಯ ಸೇರಿದಂತೆ ವಿವಿಧ ಸಾಂಸ್ಕೃತಿಕ ತಂಡಗಳು ಭಾಗವಹಿಸಿದ್ದವು. ದೇವಸ್ಥಾನದ ಹೊರ ಹಾಗೂ ಒಳಾವರಣವನ್ನು ಹೂವು ಹಾಗೂ ಹಣ್ಣು ಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!