ಜನ ಮನದ ನಾಡಿ ಮಿಡಿತ

Advertisement

ಕೊಲ್ಲೂರು ದೇವಸ್ಥಾನದಲ್ಲಿ ಶ್ರೀಮನ್ಮಹಾರಥೋತ್ಸವ ಸಂಭ್ರಮ

ಉಡುಪಿ: ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಶನಿವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.

ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ದೇಗುಲದ ಪ್ರಧಾನ ತಂತ್ರಿ ನಿತ್ಯಾನಂದ ಅಡಿಗ ನೇತೃತ್ವದಲ್ಲಿ ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗಿತ್ತು. ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ 12.30 ರ ವೇಳೆಗೆ ಜೋಡಿ ಉತ್ಸವ ಮೂರ್ತಿಗಳನ್ನು ಗರ್ಭಗುಡಿಯಿಂದ ಹೊರತಂದು, ಸುತ್ತ ಪೌಳಿಯಲ್ಲಿ ಮೂರು ಸುತ್ತು ಉತ್ಸವ ನಡೆಸಿ, ಬಳಿಕ ಓಡು ಬಲಿ ಸೇವೆಗಾಗಿ ಸೌಪರ್ಣಿಕ ನದಿ ತೀರಕ್ಕೆ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಯಲ್ಲಿ ಕೊಂಡೊಯ್ಯಲಾಯಿತು.
ಕೊಲ್ಲೂರಿನ ರಥೋತ್ಸವದ ಪರಂಪರೆಯಂತೆ ಗರ್ಭಗುಡಿಯಿಂದ ತರಲಾದ ಜೋಡಿ (ಎರಡು) ಉತ್ಸವ ಮೂರ್ತಿಗಳನ್ನು ಬ್ರಹ್ಮರಥದಲ್ಲಿ ಕುಳ್ಳಿರಿಸಿ ರಥ ಪೂಜೆ ನಡೆಸಿದ ಬಳಿಕ, ಸಾವಿರಾರು ಭಕ್ತರ ಜಯ ಘೋಷದ ನಡುವೆ, ಬೀದಿ ಗಣಪತಿ ದೇವಸ್ಥಾನದವರೆಗೆ ರಥೋತ್ಸವ ನಡೆಸಲಾಯಿತು. ಸಂಜೆ 5 ಗಂಟೆಯ ಬಳಿಕ ಬ್ರಹ್ಮರಥದಲ್ಲಿ ದೇವರನ್ನು ಕುರಿಸಿ ರಥಬೀದಿಯಲ್ಲಿ ಶಂಕರಾಶ್ರಮದವರೆಗೆ ಬ್ರಹ್ಮರಥ ಕೊಂಡೊಯ್ಯಲಾಯಿತು. ವಾರ್ಷಿಕ ಜಾತ್ರೆಯ ತೇರಿನ ವೈಭವಕ್ಕೆ ದೇಶ-ವಿದೇಶದಿಂದ ಬಂದಿದ್ದ ಸಾವಿರಾರು ಭಕ್ತರು ಸಾಕ್ಷಿಯಾದರು.
ಸಂಜೆ ನಡೆದ ವೈಭವದ ರಥೋತ್ಸವದಲ್ಲಿ ಚೆಂಡೆ ವಾದನ, ತಟ್ಟಿರಾಯ ಸೇರಿದಂತೆ ವಿವಿಧ ಸಾಂಸ್ಕೃತಿಕ ತಂಡಗಳು ಭಾಗವಹಿಸಿದ್ದವು. ದೇವಸ್ಥಾನದ ಹೊರ ಹಾಗೂ ಒಳಾವರಣವನ್ನು ಹೂವು ಹಾಗೂ ಹಣ್ಣು ಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!