ಜನ ಮನದ ನಾಡಿ ಮಿಡಿತ

Advertisement

ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಮಹಿಳೆಯರ ಆತ್ಮರಕ್ಷಣೆಗಾಗಿ ಕಾರ್ಯಾಗಾರ

ಮಂಗಳೂರು, ಮಾರ್ಚ್ 23: ಇನ್ಸ್ಟಿಟ್ಯೂಟ್ ಆಫ್ ಕರಾಟೆ & ಮಾರ್ಷಲ್ ಆರ್ಟ್ಸ್ (ಐಕೆಎಂಎ) ಸಹಯೋಗದೊಂದಿಗೆ ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಯ ಎಂಎ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಮಾರ್ಚ್ 23 ರ ಭಾನುವಾರದಂದು ಜೆಪ್ಪುವಿನ ಸಂವಾದ ಯುವ ಸಂಪನ್ಮೂಲ ಕೇಂದ್ರದಲ್ಲಿ “ದಿ ಪವರ್ ವಿಥಿನ್” ಎಂಬ ಮಹಿಳಾ ಸ್ವರಕ್ಷಣೆಗಾಗಿ ಕಾರ್ಯಾಗಾರವನ್ನು ಆಯೋಜಿಸಿದ್ದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶ್ರೀ ನಿತಿನ್ ಎನ್ ಸುವರ್ಣ ಅವರು, ಇನ್ಸ್ಟಿಟ್ಯೂಟ್ ಆಫ್ ಕರಾಟೆ & ಮಾರ್ಷಲ್ ಆರ್ಟ್ಸ್ (ಐಕೆಎಂಎ) ಯ ಮುಖ್ಯ ತರಬೇತುದಾರರಾಗಿದ್ದಾರೆ. ಸ್ವರಕ್ಷಣೆ ಒಂದು ಸಹಜ ಭಾವನೆ, ಆದರೆ ಅಗತ್ಯಬರುವಾಗ ಅದನ್ನು ಪ್ರದರ್ಶಿಸಲು ಸಾಕಷ್ಟು ಆತ್ಮವಿಶ್ವಾಸ ಮತ್ತು ಸರಿಯಾದ ಕೌಶಲ್ಯ ಇದ್ದಾಗ ಮಾತ್ರ ಸಾಧ್ಯ ಎಂದು ಅವರು ಹೇಳಿದರು. ಅವರು ತಮ್ಮೊಂದಿಗೆ ಇತರ 3 ಸಂಪನ್ಮೂಲ ವ್ಯಕ್ತಿಗಳಾದ ಕರಾಟೆ ಮತ್ತು ಮಾರ್ಷಲ್ ಆರ್ಟ್ಸ್‌ನಲ್ಲಿ ರಾಷ್ಟ್ರೀಯ ಮಟ್ಟದ ಪದಕ ವಿಜೇತರಾದ ಕುಮಾರಿ ಅಶ್ನಿ, ಕುಮಾರಿ ಅವ್ನಿ ಮತ್ತು ಕುಮಾರಿ ಜಾನ್ವಿ ಅವರ ಸಹಾಯದಿಂದ ವಿವಿಧ ತಂತ್ರಗಳು ಮತ್ತು ಸ್ವರಕ್ಷಣೆಯ ರೀತಿಗಳನ್ನು ಪರಿಣಾಮಕಾರಿಯಾಗಿ ಪ್ರದರ್ಶಿಸಿದರು. ಪಾಲ್ಗೊಂಡಿದ್ದ ಯುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸಿದರು ಮತ್ತು ಪ್ರಾತ್ಯಕ್ಷಿತೆಯಲ್ಲಿ ಪಾಲ್ಗೊಂಡರು.

ಈ ಕಾರ್ಯಕ್ರಮವು ಅಪಾಯದಲ್ಲಿರುವಾಗ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅಗತ್ಯವಿರುವ ಕೌಶಲ್ಯಗಳನ್ನು ಹೊರತರಲು ಒಂದು ವೇದಿಕೆಯಂತೆ ಕಾರ್ಯನಿರ್ವಹಿಸಿತು. ಈ ಕಾರ್ಯಕ್ರಮದಲ್ಲಿ ಕೆಲ ಪುರುಷರೂ ಭಾಗವಹಿಸಿದ್ದು, ಮಹಿಳೆಯರಿಗೆ ಜೊತೆ ನಡೆದುಕೊಳ್ಳುವಲ್ಲಿ ಸಮಾನತೆಯ ಅಗತ್ಯದ ಬಗ್ಗೆ ಅವರಿಗೆ ತಿಳುವಳಿಕೆ ನೀಡಲಾಯಿತು. ಕಾರ್ಯಾಗಾರವು ಪ್ರಶ್ನೋತ್ತರದೊಂದಿಗೆ ಕೊನೆಗೊಂಡಿತು, ಭಾಗವಹಿಸಿದವರು ಆತ್ಮರಕ್ಷಣೆಯ ಬಗ್ಗೆ ತಮ್ಮ ಅನುಮಾನಗಳನ್ನು ಸ್ಪಷ್ಟಪಡಿಸಿಕೊಂಡರು.

ಶ್ರೀ ವಿಲ್ಸನ್ ಮತ್ತು ಶ್ರೀಮತಿ ಅಶ್ವಿನಿ ಕಾರ್ಯಕ್ರಮದ ಶಿಕ್ಷಕ ಸಂಚಾಲಕರಾಗಿದ್ದರು ಮತ್ತು ಶ್ರೀ ಕಶ್ಯಪ್ ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿ ಸಂಚಾಲಕರಾಗಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!