ಮಂಗಳೂರು, ಮಾರ್ಚ್ 23: ಇನ್ಸ್ಟಿಟ್ಯೂಟ್ ಆಫ್ ಕರಾಟೆ & ಮಾರ್ಷಲ್ ಆರ್ಟ್ಸ್ (ಐಕೆಎಂಎ) ಸಹಯೋಗದೊಂದಿಗೆ ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಯ ಎಂಎ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಮಾರ್ಚ್ 23 ರ ಭಾನುವಾರದಂದು ಜೆಪ್ಪುವಿನ ಸಂವಾದ ಯುವ ಸಂಪನ್ಮೂಲ ಕೇಂದ್ರದಲ್ಲಿ “ದಿ ಪವರ್ ವಿಥಿನ್” ಎಂಬ ಮಹಿಳಾ ಸ್ವರಕ್ಷಣೆಗಾಗಿ ಕಾರ್ಯಾಗಾರವನ್ನು ಆಯೋಜಿಸಿದ್ದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶ್ರೀ ನಿತಿನ್ ಎನ್ ಸುವರ್ಣ ಅವರು, ಇನ್ಸ್ಟಿಟ್ಯೂಟ್ ಆಫ್ ಕರಾಟೆ & ಮಾರ್ಷಲ್ ಆರ್ಟ್ಸ್ (ಐಕೆಎಂಎ) ಯ ಮುಖ್ಯ ತರಬೇತುದಾರರಾಗಿದ್ದಾರೆ. ಸ್ವರಕ್ಷಣೆ ಒಂದು ಸಹಜ ಭಾವನೆ, ಆದರೆ ಅಗತ್ಯಬರುವಾಗ ಅದನ್ನು ಪ್ರದರ್ಶಿಸಲು ಸಾಕಷ್ಟು ಆತ್ಮವಿಶ್ವಾಸ ಮತ್ತು ಸರಿಯಾದ ಕೌಶಲ್ಯ ಇದ್ದಾಗ ಮಾತ್ರ ಸಾಧ್ಯ ಎಂದು ಅವರು ಹೇಳಿದರು. ಅವರು ತಮ್ಮೊಂದಿಗೆ ಇತರ 3 ಸಂಪನ್ಮೂಲ ವ್ಯಕ್ತಿಗಳಾದ ಕರಾಟೆ ಮತ್ತು ಮಾರ್ಷಲ್ ಆರ್ಟ್ಸ್ನಲ್ಲಿ ರಾಷ್ಟ್ರೀಯ ಮಟ್ಟದ ಪದಕ ವಿಜೇತರಾದ ಕುಮಾರಿ ಅಶ್ನಿ, ಕುಮಾರಿ ಅವ್ನಿ ಮತ್ತು ಕುಮಾರಿ ಜಾನ್ವಿ ಅವರ ಸಹಾಯದಿಂದ ವಿವಿಧ ತಂತ್ರಗಳು ಮತ್ತು ಸ್ವರಕ್ಷಣೆಯ ರೀತಿಗಳನ್ನು ಪರಿಣಾಮಕಾರಿಯಾಗಿ ಪ್ರದರ್ಶಿಸಿದರು. ಪಾಲ್ಗೊಂಡಿದ್ದ ಯುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸಿದರು ಮತ್ತು ಪ್ರಾತ್ಯಕ್ಷಿತೆಯಲ್ಲಿ ಪಾಲ್ಗೊಂಡರು.
ಈ ಕಾರ್ಯಕ್ರಮವು ಅಪಾಯದಲ್ಲಿರುವಾಗ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅಗತ್ಯವಿರುವ ಕೌಶಲ್ಯಗಳನ್ನು ಹೊರತರಲು ಒಂದು ವೇದಿಕೆಯಂತೆ ಕಾರ್ಯನಿರ್ವಹಿಸಿತು. ಈ ಕಾರ್ಯಕ್ರಮದಲ್ಲಿ ಕೆಲ ಪುರುಷರೂ ಭಾಗವಹಿಸಿದ್ದು, ಮಹಿಳೆಯರಿಗೆ ಜೊತೆ ನಡೆದುಕೊಳ್ಳುವಲ್ಲಿ ಸಮಾನತೆಯ ಅಗತ್ಯದ ಬಗ್ಗೆ ಅವರಿಗೆ ತಿಳುವಳಿಕೆ ನೀಡಲಾಯಿತು. ಕಾರ್ಯಾಗಾರವು ಪ್ರಶ್ನೋತ್ತರದೊಂದಿಗೆ ಕೊನೆಗೊಂಡಿತು, ಭಾಗವಹಿಸಿದವರು ಆತ್ಮರಕ್ಷಣೆಯ ಬಗ್ಗೆ ತಮ್ಮ ಅನುಮಾನಗಳನ್ನು ಸ್ಪಷ್ಟಪಡಿಸಿಕೊಂಡರು.
ಶ್ರೀ ವಿಲ್ಸನ್ ಮತ್ತು ಶ್ರೀಮತಿ ಅಶ್ವಿನಿ ಕಾರ್ಯಕ್ರಮದ ಶಿಕ್ಷಕ ಸಂಚಾಲಕರಾಗಿದ್ದರು ಮತ್ತು ಶ್ರೀ ಕಶ್ಯಪ್ ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿ ಸಂಚಾಲಕರಾಗಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…