ಮಂಗಳೂರು, ಮಾರ್ಚ್ 23: ಇನ್ಸ್ಟಿಟ್ಯೂಟ್ ಆಫ್ ಕರಾಟೆ & ಮಾರ್ಷಲ್ ಆರ್ಟ್ಸ್ (ಐಕೆಎಂಎ) ಸಹಯೋಗದೊಂದಿಗೆ ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಯ ಎಂಎ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಮಾರ್ಚ್ 23 ರ ಭಾನುವಾರದಂದು ಜೆಪ್ಪುವಿನ ಸಂವಾದ ಯುವ ಸಂಪನ್ಮೂಲ ಕೇಂದ್ರದಲ್ಲಿ “ದಿ ಪವರ್ ವಿಥಿನ್” ಎಂಬ ಮಹಿಳಾ ಸ್ವರಕ್ಷಣೆಗಾಗಿ ಕಾರ್ಯಾಗಾರವನ್ನು ಆಯೋಜಿಸಿದ್ದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶ್ರೀ ನಿತಿನ್ ಎನ್ ಸುವರ್ಣ ಅವರು, ಇನ್ಸ್ಟಿಟ್ಯೂಟ್ ಆಫ್ ಕರಾಟೆ & ಮಾರ್ಷಲ್ ಆರ್ಟ್ಸ್ (ಐಕೆಎಂಎ) ಯ ಮುಖ್ಯ ತರಬೇತುದಾರರಾಗಿದ್ದಾರೆ. ಸ್ವರಕ್ಷಣೆ ಒಂದು ಸಹಜ ಭಾವನೆ, ಆದರೆ ಅಗತ್ಯಬರುವಾಗ ಅದನ್ನು ಪ್ರದರ್ಶಿಸಲು ಸಾಕಷ್ಟು ಆತ್ಮವಿಶ್ವಾಸ ಮತ್ತು ಸರಿಯಾದ ಕೌಶಲ್ಯ ಇದ್ದಾಗ ಮಾತ್ರ ಸಾಧ್ಯ ಎಂದು ಅವರು ಹೇಳಿದರು. ಅವರು ತಮ್ಮೊಂದಿಗೆ ಇತರ 3 ಸಂಪನ್ಮೂಲ ವ್ಯಕ್ತಿಗಳಾದ ಕರಾಟೆ ಮತ್ತು ಮಾರ್ಷಲ್ ಆರ್ಟ್ಸ್ನಲ್ಲಿ ರಾಷ್ಟ್ರೀಯ ಮಟ್ಟದ ಪದಕ ವಿಜೇತರಾದ ಕುಮಾರಿ ಅಶ್ನಿ, ಕುಮಾರಿ ಅವ್ನಿ ಮತ್ತು ಕುಮಾರಿ ಜಾನ್ವಿ ಅವರ ಸಹಾಯದಿಂದ ವಿವಿಧ ತಂತ್ರಗಳು ಮತ್ತು ಸ್ವರಕ್ಷಣೆಯ ರೀತಿಗಳನ್ನು ಪರಿಣಾಮಕಾರಿಯಾಗಿ ಪ್ರದರ್ಶಿಸಿದರು. ಪಾಲ್ಗೊಂಡಿದ್ದ ಯುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸಿದರು ಮತ್ತು ಪ್ರಾತ್ಯಕ್ಷಿತೆಯಲ್ಲಿ ಪಾಲ್ಗೊಂಡರು.
ಈ ಕಾರ್ಯಕ್ರಮವು ಅಪಾಯದಲ್ಲಿರುವಾಗ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅಗತ್ಯವಿರುವ ಕೌಶಲ್ಯಗಳನ್ನು ಹೊರತರಲು ಒಂದು ವೇದಿಕೆಯಂತೆ ಕಾರ್ಯನಿರ್ವಹಿಸಿತು. ಈ ಕಾರ್ಯಕ್ರಮದಲ್ಲಿ ಕೆಲ ಪುರುಷರೂ ಭಾಗವಹಿಸಿದ್ದು, ಮಹಿಳೆಯರಿಗೆ ಜೊತೆ ನಡೆದುಕೊಳ್ಳುವಲ್ಲಿ ಸಮಾನತೆಯ ಅಗತ್ಯದ ಬಗ್ಗೆ ಅವರಿಗೆ ತಿಳುವಳಿಕೆ ನೀಡಲಾಯಿತು. ಕಾರ್ಯಾಗಾರವು ಪ್ರಶ್ನೋತ್ತರದೊಂದಿಗೆ ಕೊನೆಗೊಂಡಿತು, ಭಾಗವಹಿಸಿದವರು ಆತ್ಮರಕ್ಷಣೆಯ ಬಗ್ಗೆ ತಮ್ಮ ಅನುಮಾನಗಳನ್ನು ಸ್ಪಷ್ಟಪಡಿಸಿಕೊಂಡರು.
ಶ್ರೀ ವಿಲ್ಸನ್ ಮತ್ತು ಶ್ರೀಮತಿ ಅಶ್ವಿನಿ ಕಾರ್ಯಕ್ರಮದ ಶಿಕ್ಷಕ ಸಂಚಾಲಕರಾಗಿದ್ದರು ಮತ್ತು ಶ್ರೀ ಕಶ್ಯಪ್ ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿ ಸಂಚಾಲಕರಾಗಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…