ಬಂಟ್ವಾಳ: ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದರು.
ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆದ ವೀರಕಂಭ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳಿಂದ ಗ್ರಾಮ ಸ್ವಚ್ಛತೆಗೆ ಅಡ್ಡಿಯಾಗಿದ್ದು, ಪರಿಚಯ ಇಲ್ಲದವರಿಗೆ ಬಾಡಿಗೆ ನೀಡಿರುವುದರಿಂದ ಕ್ರಮ ಚಟುವಟಿಕೆಗಳು ನಡೆಯುತ್ತಿದೆ,ಬಾಡಿಗೆ ಮನೆ ನೀಡುವಾಗ ಸೂಕ್ತ ದಾಖಲಾತಿ ಪಡೆದು ಗ್ರಾಮ ಪಂಚಾಯತಿಗೆ ಮಾಹಿತಿ ನೀಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.ವೀರಕಂಬ ಗ್ರಾಮದಲ್ಲಿ ಆರೋಗ್ಯ ಕೇಂದ್ರ ನಿರ್ಮಿಸಲು ಕಾದಿರಿಸಿದ ಜಾಗದಲ್ಲಿ ಶೀಘ್ರವೇ ಆರೋಗ್ಯ ಉಪ ಕೇಂದ್ರ ರಚಿಸಬೇಕು, ಗ್ರಾಮದಲ್ಲಿರುವ ಗೋಮಾಲ ಜಾಗವನ್ನು ಗಡಿ ಗುರುತು ಮಾಡಬೇಕು, ಘಣ ತ್ಯಾಜ್ಯ ಘಟಕ ಕೂಡಲೇ ಉದ್ಘಾಟಿಸಿ, ರಸ್ತೆ ಬದಿಯಲ್ಲಿ ಕಸ ಎಸೆಯುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.
ಗ್ರಾಮಸ್ಥರಿಗೆ ವಿವಿಧ ಇಲಾಖೆಗಳಾದ ಅರೋಗ್ಯ,ಮೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನ ಇಲಾಖೆ, ತೋಟಗಾರಿಕಾ ಇಲಾಖೆ ವತಿಯಿಂದ ಗ್ರಾಮಸ್ಥರಿಗೆ ಇಲಾಖಾವಾರು ಮಾಹಿತಿ ನೀಡಿದರು.
ಗ್ರಾಮ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ತೊಡೆಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರದೀಪ್ ಭಾಗವಹಿಸಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.
ಗ್ರಾಮಸ್ಥರು ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಲಲಿತ,ಉಪಾಧ್ಯಕ್ಷ ಜನಾರ್ಧನ ಪೂಜಾರಿ ಗ್ರಾಮ ಪಂಚಾಯತ್ ಸದಸ್ಯರುಗಳು, ವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಗ್ರಾಮ ವ್ಯಾಪ್ತಿಯ ಆರೋಗ್ಯ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಪಂಚಾಯತ್ ಸಿಬ್ಬಂದಿಗಳು,ಗ್ರಾಮಸ್ಥರು ಭಾಗವಹಿಸಿದ್ದರು.
ಮಜಿ ಶಾಲಾ ಮಕ್ಕಳು ನಾಡಗೀತೆ ಹಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಷ್ಪ ಎಂ ಸ್ವಾಗತಿಸಿ, ಕಾರ್ಯದರ್ಶಿ ಸವಿತಾ ವಂದಿಸಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…