ಉಡುಪಿ: ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಪರಿಶಿಷ್ಟ ಜಾತಿಯ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಹೀನಾಯ ಕೃತ್ಯವನ್ನು ಸಮರ್ಥಿಸಿದ ಹಾಗೂ ಆಕೆಯನ್ನು ಕಳ್ಳಿಯೆಂದು ನಿಂದಿಸಿ, ಪ್ರಚೋದನಕಾರಿ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ರನ್ನು ಕೂಡಲೇ ಬಂಧಿಸಬೇಕು ಮತ್ತು ಕೃತ್ಯ ಎಸಗಿದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗದ ಕರ್ನಾಟಕ ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಆರ್.ಡಿ. ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಪೆ ಮೀನುಗಾರರ ಸಂಘ ಆಯೋಜಿಸಿದ ಸಭೆಯಲ್ಲಿ ದಲಿತ ಮಹಿಳೆಯ ಮೇಲೆ ನಡೆದ ಹಲ್ಲೆ ಕೃತ್ಯವನ್ನು ಸಮರ್ಥಿಸಿದ ಮಾಜಿ ಸಚಿವರಾದ ಕೆ.ರಘುಪತಿ ಭಟ್ ಹಾಗೂ ಪ್ರಮೋದ್ ಮಧ್ವರಾಜ್ ಬೇಷರತ್ ಆಗಿ ಕ್ಷಮೆ ಯಾಚಿಸಬೇಕು ಎಂದರು.
ಪರಿಶಿಷ್ಟ ಜಾತಿ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಸಾರ್ವಜನಿಕವಾಗಿ ಮರಕ್ಕೆ ಕಟ್ಟಿ ಹಾಕಿ ಥಳಿಸಿರುವುದನ್ನು ಸಮುದಾಯ ಉಗ್ರವಾಗಿ ಖಂಡಿಸುತ್ತದೆ. ಈ ಕೃತ್ಯ ಸಮಸ್ತ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದರು.
ಮಾ.18ರಂದು ಮಲ್ಪೆ ಬಂದರು ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಒಂದೆರಡು ಕೆ.ಜಿ. ಮೀನು ತೆಗೆದ ಕಾರಣಕ್ಕಾಗಿ ಕಟ್ಟಿ ಹಾಕಿ ಥಳಿಸಿರುವುದು, ಹೀನಾಮಾನವಾಗಿ ನಿಂದಿಸಿರುವುದು ನಾಗರಿಕ ಸಮಾಜಕ್ಕೆ ಕಳಂಕ. ಇದರಿಂದ ಮಹಿಳೆಗೆ ಅವಮಾನವಾಗಿದೆ. ಆಕೆಯ ಸ್ವಾಭಿಮಾನಕ್ಕೆ, ಆತ್ಮಾಭಿಮಾನಕ್ಕೆ ಧಕ್ಕೆಯಾಗಿದೆ. ಈ ಘಟನೆಯಲ್ಲಿ ಮಹಿಳೆಯ ರಕ್ಷಣೆಗೆ ನಿಲ್ಲಬೇಕಿದ್ದ ಮಾಜಿ ಶಾಸಕರು, ಸಚಿವರು, ಹೊಟ್ಟೆಪಾಡಿಗಾಗಿ ಒಂದೆರಡು ಕೆ.ಜಿ.ಮೀನು ತೆಗೆದ ಮಹಿಳೆಯನ್ನು ರಾಜಕೀಯ ಕಾರಣಗಳಿಗಾಗಿ ದೂಷಿಸಿ, ಆಕೆಯನ್ನು ಕಳ್ಳಿಯೆಂದು ಘೋಷಿಸಿ ಅಪಮಾನಿಸಿದ್ದಾರೆ ಎಂದು ಅವರು ದೂರಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…