ಉಡುಪಿ: ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಪರಿಶಿಷ್ಟ ಜಾತಿಯ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಹೀನಾಯ ಕೃತ್ಯವನ್ನು ಸಮರ್ಥಿಸಿದ ಹಾಗೂ ಆಕೆಯನ್ನು ಕಳ್ಳಿಯೆಂದು ನಿಂದಿಸಿ, ಪ್ರಚೋದನಕಾರಿ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ರನ್ನು ಕೂಡಲೇ ಬಂಧಿಸಬೇಕು ಮತ್ತು ಕೃತ್ಯ ಎಸಗಿದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗದ ಕರ್ನಾಟಕ ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಆರ್.ಡಿ. ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಪೆ ಮೀನುಗಾರರ ಸಂಘ ಆಯೋಜಿಸಿದ ಸಭೆಯಲ್ಲಿ ದಲಿತ ಮಹಿಳೆಯ ಮೇಲೆ ನಡೆದ ಹಲ್ಲೆ ಕೃತ್ಯವನ್ನು ಸಮರ್ಥಿಸಿದ ಮಾಜಿ ಸಚಿವರಾದ ಕೆ.ರಘುಪತಿ ಭಟ್ ಹಾಗೂ ಪ್ರಮೋದ್ ಮಧ್ವರಾಜ್ ಬೇಷರತ್ ಆಗಿ ಕ್ಷಮೆ ಯಾಚಿಸಬೇಕು ಎಂದರು.
ಪರಿಶಿಷ್ಟ ಜಾತಿ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಸಾರ್ವಜನಿಕವಾಗಿ ಮರಕ್ಕೆ ಕಟ್ಟಿ ಹಾಕಿ ಥಳಿಸಿರುವುದನ್ನು ಸಮುದಾಯ ಉಗ್ರವಾಗಿ ಖಂಡಿಸುತ್ತದೆ. ಈ ಕೃತ್ಯ ಸಮಸ್ತ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದರು.
ಮಾ.18ರಂದು ಮಲ್ಪೆ ಬಂದರು ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಒಂದೆರಡು ಕೆ.ಜಿ. ಮೀನು ತೆಗೆದ ಕಾರಣಕ್ಕಾಗಿ ಕಟ್ಟಿ ಹಾಕಿ ಥಳಿಸಿರುವುದು, ಹೀನಾಮಾನವಾಗಿ ನಿಂದಿಸಿರುವುದು ನಾಗರಿಕ ಸಮಾಜಕ್ಕೆ ಕಳಂಕ. ಇದರಿಂದ ಮಹಿಳೆಗೆ ಅವಮಾನವಾಗಿದೆ. ಆಕೆಯ ಸ್ವಾಭಿಮಾನಕ್ಕೆ, ಆತ್ಮಾಭಿಮಾನಕ್ಕೆ ಧಕ್ಕೆಯಾಗಿದೆ. ಈ ಘಟನೆಯಲ್ಲಿ ಮಹಿಳೆಯ ರಕ್ಷಣೆಗೆ ನಿಲ್ಲಬೇಕಿದ್ದ ಮಾಜಿ ಶಾಸಕರು, ಸಚಿವರು, ಹೊಟ್ಟೆಪಾಡಿಗಾಗಿ ಒಂದೆರಡು ಕೆ.ಜಿ.ಮೀನು ತೆಗೆದ ಮಹಿಳೆಯನ್ನು ರಾಜಕೀಯ ಕಾರಣಗಳಿಗಾಗಿ ದೂಷಿಸಿ, ಆಕೆಯನ್ನು ಕಳ್ಳಿಯೆಂದು ಘೋಷಿಸಿ ಅಪಮಾನಿಸಿದ್ದಾರೆ ಎಂದು ಅವರು ದೂರಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…