ಜನ ಮನದ ನಾಡಿ ಮಿಡಿತ

Advertisement

ಮಲ್ಪೆ ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ: ಪ್ರಕರಣ ವಾಪಾಸ್ಸು ಪಡೆಯುವಂತೆ ಸಂತ್ರಸ್ತೆಯಿಂದ ಡಿಸಿಗೆ ಮನವಿ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಘಟನೆಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂತ್ರಸ್ತೆ ಲಕ್ಕವ್ವ ಬಾಯಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.


ಸಮುದಾಯದವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಹಲವು ವರ್ಷಗಳಿಂದ ವಿವಿಧ ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಉಡುಪಿಗೆ ಬಂದು ಮಲ್ಪೆ ಮೀನುಗಾರರ ಸಂಘದ ಸಹಕಾರದಿಂದ ಮಲ್ಪೆ ಬಂದರಿನಲ್ಲಿ ಕೆಲಸ ಮಾಡಿಕೊಂಡಿದ್ದೇವೆ. ಇತ್ತೀಚೆಗೆ ಆಕಸ್ಮಿಕವಾಗಿ ನಡೆದ ಘಟನೆಯನ್ನು ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೌಹಾರ್ದಯುತವಾಗಿ ಇತ್ಯರ್ಥ ಮಾಡಿಕೊಳ್ಳಲಾಗಿದೆ. ಆದರೂ ಮುಗ್ದ ಮೀನುಗಾರರ ಮೇಲೆ ಕೇಸುಗಳನ್ನು ಹಾಕಿ ಬಂಧಿಸಿರುವುದು ಸರಿಯಲ್ಲ ಎಂದು ಮನವಿಯಲ್ಲಿ ಅವರು ತಿಳಿಸಿದ್ದಾರೆ.
ಮೀನುಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಸಾವಿರಾರು ಮಂದಿ ಉದ್ಯೋಗ ಅರಸಿ ಬಂದ ನಮ್ಮಂತಹ ಬಡ ಕಾರ್ಮಿಕರಿಗೆ ಸೌಹಾರ್ದಯುತ ರೀತಿಯಲ್ಲಿ ಕೆಲಸ ಮಾಡಿ ಉತ್ತಮ ಜೀವನ ನಡೆಸಲು ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬಂಜಾರ ಸಮುದಾಯದ ರಾಷ್ಟ್ರೀಯ ಸಂಘಟನೆ ಕಾರ್ಯದರ್ಶಿ ಜಯಸಿಂಹ, ಬಂಜಾರ ಸಮುದಾಯದ ಸ್ಥಳೀಯ ಮುಖಂಡ ಮಂಜುನಾಥ ಚೌಹಾಣ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!