ಜನ ಮನದ ನಾಡಿ ಮಿಡಿತ

Advertisement

ಪತ್ನಿಯ ಎದುರೇ ಪತಿಯ ದಾರುಣ ಹತ್ಯೆ; 4 ತಿಂಗಳ ಹಿಂದೆಯಷ್ಟೇ ನಡೆದಿತ್ತು ಮದುವೆ!

ಬೆಳಗಾವಿ: ಪತ್ನಿ ಎದುರೇ ಪತಿ ಮೇಲೆ ಹಲ್ಲೆ ನಡೆಸಿ ಕೊಲೆಗೈದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಶಂಕರ ಸಿದ್ದಪ್ಪ ಜಗಮುತ್ತಿ (25) ಕೊಲೆಯಾದ ವ್ಯಕ್ತಿ. ಇಂದು ಅಮಾವಾಸ್ಯೆ ನಿಮಿತ್ತ ವಡೇರಟ್ಟಿ ಗ್ರಾಮದ ಬಾಣಸಿದ್ದೇಶ್ವರ ದೇವಸ್ಥಾನಕ್ಕೆ ಪತ್ನಿ ಪ್ರಿಯಾಂಕಾ ಅವರೊಂದಿಗೆ ಆಗಮಿಸಿದ್ದ ವೇಳೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಮೂರು ತಿಂಗಳ ಹಿಂದಷ್ಟೇ ಶಂಕರ್ ಮದುವೆಯಾಗಿದ್ದರು. ಇಂದು ದೇವಸ್ಥಾನಕ್ಕೆ ಬಂದಾಗ ಪತ್ನಿಯ ಮುಂದೆಯೇ ದುಷ್ಕರ್ಮಿಗಳು ಲಾಂಗುಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಪತ್ನಿ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಪತಿಯ ಹತ್ಯೆಯನ್ನು ಕಣ್ಣಾರೆ ಕಂಡ ಪ್ರಿಯಾಂಕಾ ಪ್ರತಿಕ್ರಿಯಿಸಿ, ನಿನ್ನೆ ತಡರಾತ್ರಿ ನನ್ನ ಪತಿ ನನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಇಂದು ಬೆಳಗ್ಗೆ ನನ್ನನ್ನು ದೇವಸ್ಥಾನಕ್ಕೆ ಕರೆದುಕೊಂಡು ಬಂದಿದ್ದರು. ಬೈಕ್ ತಿರುಗಿಸಿಕೊಂಡು ಬರ್ತಾರೆ ಅಂತ ನಾನು ಮುಂದೆ ಹೋಗಿ ನಿಂತುಕೊಂಡಿದ್ದೆ. ಅಷ್ಟರಲ್ಲಿ ಲಾಂಗ್ ಹಿಡಿದುಕೊಂಡು ಬಂದ ಒಬ್ಬ ವ್ಯಕ್ತಿ ಗಂಡನ ಮೇಲೆ ಹಲ್ಲೆ ಮಾಡಿ ಪರಾರಿಯಾದ. ನಾನು ಓಡಿ ಹೋಗುವಷ್ಟರಲ್ಲಿ ಅವರು ಕೆಳಗೆ ಬಿದ್ದಿದ್ದರು” ಎಂದು ಘಟನೆಯನ್ನು ವಿವರಿಸಿದರು. “ಮದುವೆಯಾಗಿ ಇದೇ 19ನೇ ತಾರೀಕಿಗೆ ನಾಲ್ಕು ತಿಂಗಳು ಪೂರ್ಣವಾಗುತ್ತಿತ್ತು” ಎಂದು ಅವರು ಕಣ್ಣೀರು ಸುರಿಸಿದರು. ಮೂಡಲಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

error: Content is protected !!