ಬೆಳಗಾವಿ: ಪತ್ನಿ ಎದುರೇ ಪತಿ ಮೇಲೆ ಹಲ್ಲೆ ನಡೆಸಿ ಕೊಲೆಗೈದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಶಂಕರ ಸಿದ್ದಪ್ಪ ಜಗಮುತ್ತಿ (25) ಕೊಲೆಯಾದ ವ್ಯಕ್ತಿ. ಇಂದು ಅಮಾವಾಸ್ಯೆ ನಿಮಿತ್ತ ವಡೇರಟ್ಟಿ ಗ್ರಾಮದ ಬಾಣಸಿದ್ದೇಶ್ವರ ದೇವಸ್ಥಾನಕ್ಕೆ ಪತ್ನಿ ಪ್ರಿಯಾಂಕಾ ಅವರೊಂದಿಗೆ ಆಗಮಿಸಿದ್ದ ವೇಳೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಮೂರು ತಿಂಗಳ ಹಿಂದಷ್ಟೇ ಶಂಕರ್ ಮದುವೆಯಾಗಿದ್ದರು. ಇಂದು ದೇವಸ್ಥಾನಕ್ಕೆ ಬಂದಾಗ ಪತ್ನಿಯ ಮುಂದೆಯೇ ದುಷ್ಕರ್ಮಿಗಳು ಲಾಂಗುಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಪತ್ನಿ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಪತಿಯ ಹತ್ಯೆಯನ್ನು ಕಣ್ಣಾರೆ ಕಂಡ ಪ್ರಿಯಾಂಕಾ ಪ್ರತಿಕ್ರಿಯಿಸಿ, ನಿನ್ನೆ ತಡರಾತ್ರಿ ನನ್ನ ಪತಿ ನನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಇಂದು ಬೆಳಗ್ಗೆ ನನ್ನನ್ನು ದೇವಸ್ಥಾನಕ್ಕೆ ಕರೆದುಕೊಂಡು ಬಂದಿದ್ದರು. ಬೈಕ್ ತಿರುಗಿಸಿಕೊಂಡು ಬರ್ತಾರೆ ಅಂತ ನಾನು ಮುಂದೆ ಹೋಗಿ ನಿಂತುಕೊಂಡಿದ್ದೆ. ಅಷ್ಟರಲ್ಲಿ ಲಾಂಗ್ ಹಿಡಿದುಕೊಂಡು ಬಂದ ಒಬ್ಬ ವ್ಯಕ್ತಿ ಗಂಡನ ಮೇಲೆ ಹಲ್ಲೆ ಮಾಡಿ ಪರಾರಿಯಾದ. ನಾನು ಓಡಿ ಹೋಗುವಷ್ಟರಲ್ಲಿ ಅವರು ಕೆಳಗೆ ಬಿದ್ದಿದ್ದರು” ಎಂದು ಘಟನೆಯನ್ನು ವಿವರಿಸಿದರು. “ಮದುವೆಯಾಗಿ ಇದೇ 19ನೇ ತಾರೀಕಿಗೆ ನಾಲ್ಕು ತಿಂಗಳು ಪೂರ್ಣವಾಗುತ್ತಿತ್ತು” ಎಂದು ಅವರು ಕಣ್ಣೀರು ಸುರಿಸಿದರು. ಮೂಡಲಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…