ಬೆಳಗಾವಿ: ಪತ್ನಿ ಎದುರೇ ಪತಿ ಮೇಲೆ ಹಲ್ಲೆ ನಡೆಸಿ ಕೊಲೆಗೈದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಶಂಕರ ಸಿದ್ದಪ್ಪ ಜಗಮುತ್ತಿ (25) ಕೊಲೆಯಾದ ವ್ಯಕ್ತಿ. ಇಂದು ಅಮಾವಾಸ್ಯೆ ನಿಮಿತ್ತ ವಡೇರಟ್ಟಿ ಗ್ರಾಮದ ಬಾಣಸಿದ್ದೇಶ್ವರ ದೇವಸ್ಥಾನಕ್ಕೆ ಪತ್ನಿ ಪ್ರಿಯಾಂಕಾ ಅವರೊಂದಿಗೆ ಆಗಮಿಸಿದ್ದ ವೇಳೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಮೂರು ತಿಂಗಳ ಹಿಂದಷ್ಟೇ ಶಂಕರ್ ಮದುವೆಯಾಗಿದ್ದರು. ಇಂದು ದೇವಸ್ಥಾನಕ್ಕೆ ಬಂದಾಗ ಪತ್ನಿಯ ಮುಂದೆಯೇ ದುಷ್ಕರ್ಮಿಗಳು ಲಾಂಗುಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಪತ್ನಿ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಪತಿಯ ಹತ್ಯೆಯನ್ನು ಕಣ್ಣಾರೆ ಕಂಡ ಪ್ರಿಯಾಂಕಾ ಪ್ರತಿಕ್ರಿಯಿಸಿ, ನಿನ್ನೆ ತಡರಾತ್ರಿ ನನ್ನ ಪತಿ ನನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಇಂದು ಬೆಳಗ್ಗೆ ನನ್ನನ್ನು ದೇವಸ್ಥಾನಕ್ಕೆ ಕರೆದುಕೊಂಡು ಬಂದಿದ್ದರು. ಬೈಕ್ ತಿರುಗಿಸಿಕೊಂಡು ಬರ್ತಾರೆ ಅಂತ ನಾನು ಮುಂದೆ ಹೋಗಿ ನಿಂತುಕೊಂಡಿದ್ದೆ. ಅಷ್ಟರಲ್ಲಿ ಲಾಂಗ್ ಹಿಡಿದುಕೊಂಡು ಬಂದ ಒಬ್ಬ ವ್ಯಕ್ತಿ ಗಂಡನ ಮೇಲೆ ಹಲ್ಲೆ ಮಾಡಿ ಪರಾರಿಯಾದ. ನಾನು ಓಡಿ ಹೋಗುವಷ್ಟರಲ್ಲಿ ಅವರು ಕೆಳಗೆ ಬಿದ್ದಿದ್ದರು” ಎಂದು ಘಟನೆಯನ್ನು ವಿವರಿಸಿದರು. “ಮದುವೆಯಾಗಿ ಇದೇ 19ನೇ ತಾರೀಕಿಗೆ ನಾಲ್ಕು ತಿಂಗಳು ಪೂರ್ಣವಾಗುತ್ತಿತ್ತು” ಎಂದು ಅವರು ಕಣ್ಣೀರು ಸುರಿಸಿದರು. ಮೂಡಲಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…