ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ ಪೊಲೀಸ್ ಸ್ಟೇಷನ್‌ಗೆ ಕೆ.ಸದಾಶಿವ ಶೆಟ್ಟಿಯವರ ಕೊಡುಗೆ

ಮಂಜೇಶ್ವರ; ಪೊಲೀಸ್ ಸ್ಟೇಷನ್‌ನ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳ ಮನವಿ ಮೇರೆಗೆ ಮಂಜೇಶ್ವರ ಪೊಲೀಸ್ ಸ್ಟೇಷನ್‌ಗೆ 2 ಲ್ಯಾಪ್ ಟಾಪ್ ಹಾಗೂ 2ಪ್ರಿಂಟರ್ ಮತ್ತು ಸ್ಕಾö್ಯನರ್‌ರನ್ನ ಕೊಡುಗೈದಾನಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನರವರು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭ ಕೊಡುಗೆಯಾಗಿ ನೀಡಿದ್ರು.

ಈ ವೇಳೆ ಸದಾಶಿವ ಶೆಟ್ಟಿಯವರ ಸಾಮಾಜಿಕ ಕಾರ್ಯ ಹಾಗೂ ಸೇವೆಯನ್ನು ಸ್ಮರಿಸಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳ ಪರವಾಗಿ ಶಾಲು ಹೊದಿಸಿ, ಫಲಪುಷ್ಪಗಳನ್ನು ನೀಡಿ ಸದಾಶಿವ ಶೆಟ್ಟಿಯವರನ್ನು ಹಾಗೂ ಸಹೋದರ ಚಂದ್ರಹಾಸ ಶೆಟ್ಟಿಯವರನ್ನು ಗೌರವಿಸಲಾಯಿತು.

 

ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರ ಪೊಲೀಸ್ ಠಾಣಾಧಿಕಾರಿ ಅನೂಪ್ ಕುಮಾರ್ ಇ ವಹಿಸಿದ್ರು. ಇನ್ನು ಈ ಸಂದರ್ಭದಲ್ಲಿ ಸೀನಿಯರ್ ಸಿವಿಲ್ ಪೊಲೀಸ್ ಆಫೀಸರ್ ರಾಜೇಶ್ ಕುಮಾರ್, ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಪದಾಧಿಗಳಾದ ಕೆ.ನಾರಾಯಣ ನಾಯ್ಕ್ ನಡುಹಿತ್ತಿಲು, ಕೂಳೂರು, ಕಾರ್ತಿಕ್ ಶೆಟ್ಟಿ ಮಜಿಬೈಲು, ಚಂದ್ರಹಾಸ ಮೀಯಪದವು, ಜಯರಾಜ್ ಶೆಟ್ಟಿ ಚಾಲ್, ಜಯರಾಜ್ ಜಿ.ಶೆಟ್ಟಿ ಕೂಳೂರು, ಸುಬ್ಬಣ್ಣ ಆಳ್ವ ಮೀಯಪದವು, ವಿಜಯ ಕುಮಾರ್ ರೈ, ಚಂದ್ರಕಾAತ ಶೆಟ್ಟಿ ಇಚ್ಚಲಂಗೊAಡು, ಜಯರಾಮ ಶೆಟ್ಟಿ ಕುಳೂರು, ಶಿವಾನಂದ ಶೆಟ್ಟಿ ಕೋಡಿಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ರು.

ಮಂಜೇಶ್ವರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಉಮೇಶ್ ಕೆ ಸ್ವಾಗತಿಸಿ, ಮಂಜೇಶ್ವರ ಪೊಲೀಸ್ ಠಾಣೆಯ ರೈಟರ್ ಸಿಯಾದ್ ವಂದಿಸಿದ್ರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!