ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಸೈಂಟ್ ವಿಕ್ಟರ್ಸ್ ಪ್ರೌಢಶಾಲೆಯ ಎಸ್ಎಸ್ಎಲ್ಸಿ ಪರೀಕ್ಷಾ ವಠಾರದಲ್ಲಿ ಫಿಲ್ಮ್ ಶೂಟಿಂಗ್..!!

ಪುತ್ತೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾಗಿರುವ ಸೈಂಟ್ ವಿಕ್ಟರ್ಸ್ ಪ್ರೌಢ ಶಾಲೆಯ ಆವರಣದಲ್ಲಿ ಕನ್ನಡ ಸಿನಿಮಾವೊಂದಕ್ಕೆ ಶೂಟಿಂಗ್ ಗೆ ಅವಕಾಶ ಕೊಟ್ಟು ಶಾಲಾ ಆಡಳಿತ ಮಂಡಳಿ ಎಡವಟ್ಟು ಮಾಡಿಕೊಂಡಿದೆ.

ಇಲ್ಲಿ ನಟ ಆರ್ಯನ್ ಅಭಿನಯದ `ಲವ್ ಟು ಲಸ್ಸಿ’ ಎಂಬ ಕನ್ನಡ ಚಲನಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಇದಕ್ಕೆ ಕಳೆದ ಒಂದೂವರೆ ತಿಂಗಳ ಹಿಂದೆಯೇ ಶಾಲಾ ಸಂಚಾಲಕರಿಂದ ಅನುಮತಿ ಪಡೆಯಲಾಗಿತ್ತು. ಆದ್ರೆ ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇರಲಿಲ್ಲ. ಜೊತೆಗೆ ಪರೀಕ್ಷಾ ಕೇಂದ್ರವಾಗಿದ್ದ ಪ್ರೌಢಶಾಲೆಯಲ್ಲಿ ಪರೀಕ್ಷಾ ದಿನದಂದೇ ಶೂಟಿಂಗ್ ಗೆ ಅವಕಾಶ ಮಾಡಿಕೊಟ್ಟದ್ದು ಎಷ್ಟು ಸರಿ ಎಂಬ ಪ್ರಶ್ನೆ ಪೋಷಕರಿಂದ ವ್ಯಕ್ತವಾಯಿತು. ಇದಕ್ಕೆ ಕಾರಣ ಬೆಳಗ್ಗೆ ಶೂಟಿಂಗ್ ನಡೆಯುತ್ತಿದ್ದ ಸಂದರ್ಭ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಾಲಾ ಗೇಟು ಬಳಿ ಬಂದಾಗ ಗೇಟು ತೆರೆಯಲು ಪೊಲೀಸರು, ಗೇಟ್ ಕೀಪರ್ ನಿರಾಕರಿಸಿದರು. ಇಲ್ಲಿ ಶೂಟಿಂಗ್ ನಡೆಯುತ್ತಿದೆ ಎಂದು ಸ್ಥಿರವಿಲ್ಲದ ಉತ್ತರ ನೀಡಿದ್ರು. ಇದರಿಂದ ಕೆರಳಿದ ಪೋಷಕರು ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಸೆಕ್ಷನ್ ಇರುವಾಗ ಯಾವ ರೀತಿ ಅವಕಾಶ ಮಾಡಿ ಕೊಟ್ಟಿದ್ದೀರಿ ಎಂದು ಶಾಲಾ ಆಡಳಿತ ಮಂಡಳಿಯವರನ್ನ ತರಾಟೆಗೆತ್ತಿಕೊಂಡರು.

ಇದಾದ ಬಳಿಕ ಸುದ್ದಿ ತಿಳಿದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಶೂಟಿಂಗ್ ಸ್ಪಾಟ್ ಗೆ ಬಂದು ಸಿನಿಮಾ ಚಿತ್ರೀಕರಣ ನಿಲ್ಲಿಸುವಂತೆ ಸೂಚಿಸಿದರು. ಜೊತೆಗೆ ಪೊಲೀಸರ ಮುಖಾಂತರ ಚಲನಚಿತ್ರ ತಂಡಕ್ಕೆ ಶಾಲಾ ಬಳಿಯಿಂದ ತೆರಳುವಂತೆ ಸೂಚನೆ ನೀಡಿದ್ರು. ಇಷ್ಟೆಲ್ಲ ಆದ್ರೂ ಪರೀಕ್ಷಾ ಕೇಂದ್ರದ 200 ಮೀಟರ್ ಒಳಗಡೆ, ಹಾಗೆಯೇ ಸೆಕ್ಷನ್ 144 ಜಾರಿ ಇರುವಾಗ ಶಾಲಾ ಆಡಳಿತ ಮಂಡಳಿಯ ಶೂಟಿಂಗ್ ಗೆ ಹೇಗೆ ಅವಕಾಶ ಕೊಟ್ಟಿದ್ದಾರೆ ಎಂಬುದು ಪೋಷಕರ ವಾದ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!